ದಾವಣಗೆರೆ ನೂತನ ಎಸ್‍ಪಿಯಾಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ        

0 Min Read

 

ದಾವಣಗೆರೆ, ಆ.25 :  ದಾವಣಗೆರೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್  ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಮಿನಲ್ ಚಟುವಟಿಕೆ ತಡೆಗಟ್ಟುವುದು,  ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತದೆ. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಿರುವುದರಿಂದ ಹಾದು ಹೋಗಿರುವುದರಿಂದ ಹೆಚ್ಚು ಅಪಘಾತ ಸಂಭವಿಸುತ್ತದೆ, ಅಪಘಾತಗಳ ತಡೆಗೆ ಕ್ರಮ ಕೈಗೊಳ್ಳಲಾಗುತ್ತದೆ.

ಪೊಲೀಸರ ಜನಸ್ನೇಹಿಯಾಗಿರುಲು ಕ್ರಮ ಕೈಗೊಂಡು ಎಲ್ಲರ ಸಹಕಾರದೊಂದಿಗೆ ಉತ್ತಮ ಕೆಲಸ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು. ಈ ವೇಳೆ ಈ ಹಿಂದಿನ ಎಸ್.ಪಿ ಆಗಿದ್ದ ಡಾ.ಅರುಣ್ ಕೆ ಅವರು ಅಧಿಕಾರ ಹಸ್ತಾಂರಿಸಿ ಶುಭ ಕೋರಿದರು.

Share This Article
Leave a Comment

Leave a Reply

Your email address will not be published. Required fields are marked *