ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಜೂ. 16 : ಚಿತ್ರನಟ ದರ್ಶನ ಸಹಚರರಿಂದ ಕೊಲೆಗೀಡಾಗಿರುವ ರೇಣುಕಾ ಸ್ವಾಮಿ ಅವರ ನಿವಾಸಕ್ಕೆ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಜೊತೆಗೆ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.
ಮಗನ ಅಗಲಿಕೆಯ ದುಃಖದಲ್ಲಿರುವ ತಂದೆ ತಾಯಿಗಳನ್ನು ಭೇಟಿ ಮಾಡಿ, ಈ ಘಟನೆಯಿಂದ ಎಲ್ಲರಿಗೂ ನೋವಾಗಿದೆ, ಕರುಳ ಕುಡಿ ಕಳೆದುಕೊಂಡ ದುಃಖ ಕಳೆದುಕೊಂಡವರಿಗೆ ಮಾತ್ರ ಗೊತ್ತಾಗುತ್ತದೆ, ಮೃತ ಕುಟುಂಬಕ್ಕೆ ನ್ಯಾಯ ಒದಗಿಸಲು ನಾನು ಸಹ ಬದ್ದ, ಈ ನಿಟ್ಟಿನಲ್ಲಿ ಕುಟುಂಬದ ಧ್ವನಿಯಾಗುವೆ, ಸರ್ಕಾರ ಸಹ ನೊಂದ ಕುಟುಂಬಕ್ಕೆ ನೆರವಾಗಬೇಕು, ಅಭಯ ತುಂಬುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನಗರ ಸಭೆ ಸದಸ್ಯರಾದ ಶಶಿಧರ, ಹಾಗೂ ಮಾಜಿ ನಗರಾಭಿವೃದ್ಧಿ ಅಧ್ಯಕ್ಷರಾದ ಬದ್ರಿನಾಥ ಜೊತೆಗಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















