Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾ ಸ್ವಾಮಿ ಮನೆಗೆ ಉಮೇಶ ಕಾರಜೋಳ ಭೇಟಿ  : ಸಾಂತ್ವನ

---Advertisement---

 

 

ವರದಿ ಮತ್ತು ಫೋಟೋ ಕೃಪೆ

ಸುರೇಶ್ ಪಟ್ಟಣ್,                         
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜೂ. 16 : ಚಿತ್ರನಟ ದರ್ಶನ ಸಹಚರರಿಂದ ಕೊಲೆಗೀಡಾಗಿರುವ ರೇಣುಕಾ ಸ್ವಾಮಿ ಅವರ ನಿವಾಸಕ್ಕೆ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಜೊತೆಗೆ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.

ಮಗನ ಅಗಲಿಕೆಯ ದುಃಖದಲ್ಲಿರುವ ತಂದೆ ತಾಯಿಗಳನ್ನು ಭೇಟಿ ಮಾಡಿ, ಈ ಘಟನೆಯಿಂದ ಎಲ್ಲರಿಗೂ ನೋವಾಗಿದೆ,  ಕರುಳ ಕುಡಿ ಕಳೆದುಕೊಂಡ ದುಃಖ ಕಳೆದುಕೊಂಡವರಿಗೆ ಮಾತ್ರ ಗೊತ್ತಾಗುತ್ತದೆ, ಮೃತ ಕುಟುಂಬಕ್ಕೆ ನ್ಯಾಯ ಒದಗಿಸಲು ನಾನು ಸಹ ಬದ್ದ, ಈ ನಿಟ್ಟಿನಲ್ಲಿ ಕುಟುಂಬದ ಧ್ವನಿಯಾಗುವೆ, ಸರ್ಕಾರ ಸಹ ನೊಂದ ಕುಟುಂಬಕ್ಕೆ ನೆರವಾಗಬೇಕು, ಅಭಯ ತುಂಬುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಗರ ಸಭೆ ಸದಸ್ಯರಾದ ಶಶಿಧರ, ಹಾಗೂ ಮಾಜಿ ನಗರಾಭಿವೃದ್ಧಿ ಅಧ್ಯಕ್ಷರಾದ ಬದ್ರಿನಾಥ ಜೊತೆಗಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment