Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ದಿಢೀರ್ ಭೇಟಿ, ಪರಿಶೀಲನೆ

Facebook
Twitter
Telegram
WhatsApp

ಚಿತ್ರದುರ್ಗ ಡಿ. 28 : ಪ್ರಸವಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ (ಪಿಸಿ & ಪಿಎನ್‍ಡಿಟಿ) ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯು ಪಿಸಿ&ಪಿಎನ್‍ಡಿಟಿ ತಂಡದೊಂದಿಗೆ ಹಿರಿಯೂರು ನಗರದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು, ಅಲ್ಲದೆ ಅಲ್ಲಿ ಕಂಡುಬಂದ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚನೆ ನೀಡಿತು.


ಪಿಸಿ&ಪಿಎನ್‍ಡಿಟಿ ಕಾಯ್ದೆ ಅನುಷ್ಠಾನ ಸಂಬಂಧ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಪಿ.ರೇಣುಪ್ರಸಾದ್ ಹಾಗೂ ಸಮಿತಿಯ ಸದಸ್ಯರಾದ ಡಾ. ಸತ್ಯನಾರಾಯಣ ಅವರು ಹಿರಿಯೂರು ನಗರದ ಮುಖ್ಯರಸ್ತೆಯಲ್ಲಿರುವ ಬಾಲಾಜಿ ನರ್ಸಿಂಗ್ ಹೋಮ್ ಮತ್ತು ದಂತ ಚಿಕಿತ್ಸಾಲಯದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡಿರುವ ದಾಖಲಾತಿ, ರಿಜಿಸ್ಟರ್ (ಎಎನ್‍ಸಿ) ಸರಿಯಾಗಿ ನಿರ್ವಹಿಸಲು ಸೂಚಿಸಿದರು.

ಪಿಸಿ&ಪಿಎನ್‍ಡಿಟಿ ಕಾಯ್ದೆಯ ನಿಯಮದಂತೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡುವ ಕೊಠಡಿಗೆ ಸಂಬಂಧಪಟ್ಟಂತೆ ಸೂಕ್ತ ಸ್ಥಳದಲ್ಲಿ ಗರ್ಭೀಣಿಯರಿಗೆ ಅನುಕೂಲಕರವಾಗುವ ಸ್ಥಳದಲ್ಲಿ ಬದಲಾಯಿಸಲು ಸೂಚಿಸಿದರು. ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡುವ ಕೊಠಡಿ ಒಳಗೆ-ಹೊರಗೆ ಯಾವುದೇ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್‍ಗೆ ಸಂಬಂಧಿಸಿದ ಐಇಸಿ ಮಾಹಿತಿ ಮತ್ತು ಚಿಕಿತ್ಸಾ ದರಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದು. ಎಂಟಿಪಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಿದ ಎಸ್ ಆರ್ ಎಸ್ ಹೆರಿಟೇಜ್ ಶಾಲೆ

  ಸುದ್ದಿಒನ್, ಚಿತ್ರದುರ್ಗ, ಮೇ. 20 : ಎಸ್ ಆರ್ ಎಸ್ ಹೆರಿಟೇಜ್ ಶಾಲೆಯು 2024-25 ರ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು ಬೇಸಿಗೆ ರಜಾ ಮುಗಿಸಿಕೊಂಡು ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

error: Content is protected !!