Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ದಿಢೀರ್ ಭೇಟಿ, ಪರಿಶೀಲನೆ

---Advertisement---

ಚಿತ್ರದುರ್ಗ ಡಿ. 28 : ಪ್ರಸವಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ (ಪಿಸಿ & ಪಿಎನ್‍ಡಿಟಿ) ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯು ಪಿಸಿ&ಪಿಎನ್‍ಡಿಟಿ ತಂಡದೊಂದಿಗೆ ಹಿರಿಯೂರು ನಗರದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು, ಅಲ್ಲದೆ ಅಲ್ಲಿ ಕಂಡುಬಂದ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚನೆ ನೀಡಿತು.


ಪಿಸಿ&ಪಿಎನ್‍ಡಿಟಿ ಕಾಯ್ದೆ ಅನುಷ್ಠಾನ ಸಂಬಂಧ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಪಿ.ರೇಣುಪ್ರಸಾದ್ ಹಾಗೂ ಸಮಿತಿಯ ಸದಸ್ಯರಾದ ಡಾ. ಸತ್ಯನಾರಾಯಣ ಅವರು ಹಿರಿಯೂರು ನಗರದ ಮುಖ್ಯರಸ್ತೆಯಲ್ಲಿರುವ ಬಾಲಾಜಿ ನರ್ಸಿಂಗ್ ಹೋಮ್ ಮತ್ತು ದಂತ ಚಿಕಿತ್ಸಾಲಯದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡಿರುವ ದಾಖಲಾತಿ, ರಿಜಿಸ್ಟರ್ (ಎಎನ್‍ಸಿ) ಸರಿಯಾಗಿ ನಿರ್ವಹಿಸಲು ಸೂಚಿಸಿದರು.

ಪಿಸಿ&ಪಿಎನ್‍ಡಿಟಿ ಕಾಯ್ದೆಯ ನಿಯಮದಂತೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡುವ ಕೊಠಡಿಗೆ ಸಂಬಂಧಪಟ್ಟಂತೆ ಸೂಕ್ತ ಸ್ಥಳದಲ್ಲಿ ಗರ್ಭೀಣಿಯರಿಗೆ ಅನುಕೂಲಕರವಾಗುವ ಸ್ಥಳದಲ್ಲಿ ಬದಲಾಯಿಸಲು ಸೂಚಿಸಿದರು. ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡುವ ಕೊಠಡಿ ಒಳಗೆ-ಹೊರಗೆ ಯಾವುದೇ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್‍ಗೆ ಸಂಬಂಧಿಸಿದ ಐಇಸಿ ಮಾಹಿತಿ ಮತ್ತು ಚಿಕಿತ್ಸಾ ದರಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದು. ಎಂಟಿಪಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment