Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅನಧಿಕೃತ ಗೈರು, ನಿರ್ಲಕ್ಷ್ಯ : ಚಿತ್ರದುರ್ಗ ಜಿ.ಪಂ. ಕಚೇರಿ ದ್ವಿದಸ ಅಮಾನತು

---Advertisement---

ಸುದ್ದಿಒನ್, ಚಿತ್ರದುರ್ಗ .25 : ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಜಿಲ್ಲಾ ಪಂಚಾಯತ್ ಕಚೇರಿ ಅಭಿವೃದ್ಧಿ ಶಾಖೆಯ ದ್ವಿತೀಯ ದರ್ಜೆ ಸಹಾಯಕ ಸಿ.ಎನ್. ನವನೀತ್ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪಂಚಾಯತ್ ಕಚೇರಿ ಅಭಿವೃದ್ಧಿ ಶಾಖೆಯ ದ್ವಿತೀಯ ದರ್ಜೆ ಸಹಾಯಕ ಸಿ.ಎನ್. ನವನೀತ್ ಅವರು ಮೇಲಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಹಾಗೂ ರಜೆ ಮಂಜೂರಾತಿ ಇಲ್ಲದೆ ಕಳೆದ ಮೇ. 24 ರಿಂದಲೂ ಕಚೇರಿಗೆ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ. ಸಿಬ್ಬಂದಿಗೆ ನೋಟಿಸ್ ಜಾರಿಗೊಳಿಸಿದರೂ ಸಮಜಾಯಿಷಿ ನೀಡದೆ ನಿರ್ಲಕ್ಷ್ಯ ಮನೋಭಾವ ತೋರಿರುತ್ತಾರೆ.

ಗೈರು ಹಾಜರಿ ಬಗ್ಗೆ ದೂರವಾಣಿ ಮೂಲಕ ಕರೆ ಮಾಡಿ ಸಂಪರ್ಕಿಸಲು ಯತ್ನಿಸಿದರೂ, ಅವರು ಕರೆ ಸ್ವೀಕರಿಸಿಲ್ಲ. ಇದೇ ರೀತಿ ಪದೇ ಪದೇ ಅನಧಿಕೃತವಾಗಿ ಕಚೇರಿಗೆ ಗೈರು ಹಾಜರಾಗುವ ಮೂಲಕ ಕಚೇರಿ ಕೆಲಸ ಕುಂಠಿತವಾಗಲು ಇವರು ಕಾರಣರಾಗಿರುತ್ತಾರೆ. ಹೀಗಾಗಿ ಇವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜಿ.ಪಂ. ಯೋಜನಾ ನಿರ್ದೇಶಕರು ವರದಿ ಸಲ್ಲಿಸಿರುತ್ತಾರೆ. ಇದರನ್ವಯ ದ್ವಿದಸ ಸಿ.ಎನ್. ನವನೀತ್ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ, ಸೇವೆಯಿಂದ ಅಮಾನತುಗೊಳಿಸಿದ್ದು, ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment