ಕಳೆದ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರ ಬೆಳೆ ಎಲ್ಲಾ ನೆಲ ಕಚ್ಚಿತ್ತು. ಬರದ ಛಾಯೆ ಆವರಿಸಿಕೊಂಡಿತ್ತು. ಇದರಿಂದಾಗಿ ರೈತರು ಸಾಕಷ್ಟು ನಷ್ಟ ಅನುಭವಿಸಿದರು. ಕೇಂದ್ರದಿಂದ ಬರ ಪರಿಹಾರಕ್ಕಾಗಿ ಸಾಕಷ್ಟು ಮನವಿ ಮಾಡಿದ ಮೇಲೆ ಇತ್ತಿಚೆಗೆ ಕೇಂದ್ರದಿಂದ 3,454 ಕೋಡಿ ರೂಒಅಯಿ ಬಿಡುಗಡೆ ಮಾಡಲಾಗಿತ್ತು. ಆದರೆ ಆ ಬರ ಪರಿಹಾರ ಇನ್ನು ರೈತರ ಕೈ ಸೇರಿಲ್ಲ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ.
ಯಾಕಂದ್ರೆ ಬರ ಪರಿಹಾರ ರೈತರ ಖಾತೆಗೆ ಜಮೆಯಾದರೂ ಬ್ಯಾಂಕುಗಳು ಆ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿವೆ. ಕೆಲವು ಬ್ಯಾಂಕುಗಳಲ್ಲಿ ಬೆ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದಕ್ಕೆ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿಯ ಪ್ರಗತಿ ಕೃಷ್ಣ ಬ್ಯಾಂಕ್ ನಲ್ಲಿ ಸಾಲದ ಖಾತೆಗೆ ಬರ ಪರಿಹಾರದ ಹಣವನ್ನು ಜಮೆ ಮಾಡಿಕೊಳ್ಳಲಾಗಿದೆ. ಈ ಭಾಗದ ಅದೆಷ್ಟೋ ರೈತರಿಗೆ ಈ ಸಮಸ್ಯೆ ಎದುರಾಗಿದೆ. ಬರದಿಂದಾಗಿ ಸಾಲಾ ಸೋಲ ಮಾಡಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಅನುಕೂಲವಾಗಲೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ.
ಬ್ಯಾಂಕ್ ಸಾಲ ಕೊಟ್ಟು ರೈತರ ಉಳಿತಾಯದ ಖಾತೆಗೆ ಜಮಾ ಮಾಡದೆ ಸಾಲದ ಖಾತೆಗೆ ಜಮೆ ಮಾಡಲಾಗಿದೆ. ಸರ್ಕಾರ ಪ್ರತಿ ಎಕ್ಟೇರ್ ಗೆ ಮಳೆಯಾಶ್ರಿತ ಒಣ ಬೇಸಾಯಕ್ಕೆ 8,500 ರೂಪಾಯಿ ನೀರಾವರಿಗೆ 17,000 ರೂಪಾಯಿ. ಬಹುವಾರ್ಷಿಕ/ತೋಟಗಾರಿಕರ ಬೆಳೆಗೆ 22,500 ರೂಪಾಯಿ ನೀಡಲಾಗಿದೆ. ಪರಿಹಾರ ಬಂದರೆ ಈ ಬಾರಿಯ ವ್ಯವಸಾಯಕ್ಕಾದರೂ ಅನುಕೂಲವಾಗಲಿದೆ ಎಂದುಕೊಂಡಿದ್ದರು. ಈಗಾಗಲೇ ಮುಂಗಾರು ಶುರುವಾಗಿದ್ದು, ಉಳುಮೆ ಕಡೆಗೆ ರೈತ ಗಮನ ಕೊಡುತ್ತಿದ್ದಾನೆ. ಆದರೆ ಇಂಥ ಸಮಯದಲ್ಲಿ ಬರ ಪರಿಹಾರವೂ ಸಿಗದೆ ಕಂಗಾಲಾಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












