Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಾವಂಚನೆಯ ಕೇಂದ್ರ ಬಜೆಟ್ : ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಆರೋಪ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 23 : ಬಿಜೆಪಿ ಪಕ್ಷದ ಕೇಂದ್ರ ನಾಯಕರ ಪಾಲಿಗೆ ಕರ್ನಾಟಕ ರಾಜ್ಯವು ಚುನಾವಣೆಯ ಫಲವತ್ತಾದ ಭೂಮಿಯಾಗಿದ್ದು, ಅಭಿವೃದ್ಧಿ ವಿಷಯದಲ್ಲಿ ಶತ್ರು ರಾಷ್ಟ್ರ ದಂತೆ ಕಾಣುತ್ತಿರುವುದಕ್ಕೆ ಈ ಬಾರಿಯ ಬಜೆಟ್ ದೃಢಪಡಿಸಿದೆ ಎಂದು ಮಾಜಿ ಸಂಸದ ನಿ.ಎನ್.ಚಂದ್ರಪ್ಪ ಆರೋಪಿಸಿದ್ದಾರೆ.

ವಿಧಾನಸಭೆ, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯಕ್ಕೆ ಪದೇ ಪದೆ ಭೇಟಿ ನೀಡಿ ಭರವಸೆಗಳ ಮಹಾಪುರವನ್ನೆ ಹರಿಸುವ ಬಿಜೆಪಿ ನಾಯಕರಿಗೆ ಬಜೆಟ್ ಮಂಡನೆ ಸಂದರ್ಭದಲ್ಲಿ ಕನ್ನಡದ ಜನರೇ ನೆನಪಾಗುವುದಿಲ್ಲ. ಇದೊಂದು ಕರ್ನಾಟಕ ಜನರ ಪಾಲಿಗೆ ಮಹಾ ವಂಚನೆ ಬಜೆಟ್ ಆಗಿದೆ ಎಂದು ಚಂದ್ರಪ್ಪ ದೂರಿದ್ದಾರೆ.

ಚಿತ್ರದುರ್ಗ, ತುಮಕೂರು ಜಿಲ್ಲೆಯ ಜನರ ಮಹತ್ವಾಕಾಂಕ್ಷೆಯ ಭದ್ರಾ ಮೇಲ್ದಂಡೆಗೆ ಈ ಹಿಂದಿನ ಬಜೆಟ್ ನಲ್ಲಿ 5300 ಕೋಟಿ ಘೋಷಿಸಿ, ಇಲ್ಲಲಿಯವರೆಗೂ ಬಿಡುಗಡೆ ಮಾಡಿಲ್ಲ. ರಾಷ್ಟ್ರೀಯ ಯೋಜನೆ ಮನ್ನಣೆ ನೀಡಿಲ್ಲ. ಈ ಬಜೆಟ್ ನಲ್ಲಿ ಕೂಡ ನಿರಾಸೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಮದಕರಿನಾಯಕ ಥೀಮ್ ಪಾರ್ಕ್ ಸೇರಿ ಅನೇಕ ಯೋಜನೆಗಳನ್ನು ಘೋಷಿಸಿ, ಜಾರಿಗೊಳಿಸಲಾಗುವುದು. ಚಿತ್ರದುರ್ಗ ಜಿಲ್ಲೆಯನ್ನೇ ಬೃಂದಾವನ ಮಾಡುವುದಾಗಿ ಆಸೆ ಹುಟ್ಟಿಸಿ ಮೋಸಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಅದರಲ್ಲೂ ಚಿತ್ರದುರ್ಗ, ತುಮಕೂರು ಜಿಲ್ಲೆಗೆ ತೀವ್ರ ಅನ್ಯಾಯ ಮಾಡಲಾಗಿದೆ. ಆದ್ದರಿಂದ ರಾಜ್ಯ ಬಿಜೆಪಿ ನಾಯಕರಿಗೆ ಸ್ವಾಭಿಮಾನ ಇದ್ದರೆ ಕೂಡಲೇ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ವಿಸರ್ಜಿಸಿ ಕನ್ನಡ ಜನರಿಗೆ ಗೌರವ ಕೊಡುವ ಮೂಲಕ ಕೇಂದ್ರದ ವಂಚನೆ ವಿರುದ್ಧ ವಿರೋಧ ವ್ಯಕ್ತಪಡಿಸಬೇಕು. ಇಲ್ಲದಿದ್ದರೇ ರಾಜ್ಯ ಬಿಜೆಪಿಗರು ಕೇಂದ್ರ ನಾಯಕರ ಜೀತದಾಳುಗಳು ಎಂದು ಭಾವಿಸಬೇಕಾಗುತ್ತದೆ ಎಂದು ಬಿ.ಎನ್.ಚಂದ್ರಪ್ಪ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...