Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಅಭಿವೃದ್ಧಿ ಬಗ್ಗೆ ಮಾತಾಡದೇ ನಮ್ಮ ಪಕ್ಷದ ಅಧ್ಯಕ್ಷರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ : ಸಿ. ಶಿವುಯಾದವ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಫೆ. 26 : ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ರವರು ಚುನಾವಣಾ ಪೂರ್ವದಲ್ಲಿ ನೀಡಿದ ವಿವಿಧ ರೀತಿಯ ಭರವಸೆಗಳನ್ನು ಸಂಸದರಾಗಿ ಐದು ವರ್ಷ ಪೂರೈಸುತ್ತಾ ಬಂದಿದ್ದರೂ ಅವು ಯಾವು ಸಹ ಈಡೇರಿಲ್ಲ ಅಭಿವೃಧ್ಧಿ ಬಗ್ಗೆ ಮಾತನಾಡದೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಕೆಪಿಸಿಸಿಯ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರು, ನ್ಯಾಯಾವಾದಿಗಳಾದ ಶಿವುಯಾದವ್ ಸಂಸದರ ಹೇಳಿಕೆಯನ್ನು ಖಂಡಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನಲ್ಲಿ ಅಪ್ಪರ್ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡಿ 5300 ಕೋಟಿ ರೂ ನೀಡುತ್ತೇವೆ ಎಂದು ಹೇಳಿದ್ದರು.. ಆದರೆ ಇದುವರೆಗೂ ಸಹ ಹಣ ಬಿಡುಗಡೆಯಾಗಿಲ್ಲ.. ಇದರ ಬಗ್ಗೆ ಜಿಲ್ಲೆಯ ರೈತರು ತಮ್ಮ ಕಛೇರಿಯ ಮುಂದೆ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿರುತ್ತಾರೆ ಇದರ ಬಗ್ಗೆ ಗಮನ ಹರಿಸಿ ಎಂದ ಅವರು ಮದಕರಿ ಥೀಮ್ ಪಾರ್ಕ್ ನಿರ್ಮಾಣ ಮಾಡುವುದಾಗಿ ಗೃಹ ಸಚಿವ ಅಮಿತ್ ಶಾ ರವರು ಹೇಳಿದ್ದರು ಆದರೆ ಈಗ ಅದು ಎಲ್ಲಿದೆ ಅಂತನೂ ಗೊತ್ತಿಲ್ಲ. ದಾವಣಗೆರೆ – ತುಮಕೂರು ನೇರ ರೈಲ್ವೆ ಮಾರ್ಗ ಕಾಮಗಾರಿ ಕುಂಠಿತಗೊಂಡಿದೆ… ಕಾಡುಗೊಲ್ಲ ಸಮುದಾಯವನ್ನು ಎಸ್.ಟಿಗೆ ಸೇರ್ಪಡೆ ಮಾಡುತ್ತೇವೆ ಎಂದು ಹೇಳಿದ್ದರು  ಆದರೆ ಅದರ ಬಗ್ಗೆ ಯಾವುದೇ ಮಾತಿಲ್ಲ ಎಂದು ಸಂಸದರ ಕಾರ್ಯ ವೈಖರಿಯನ್ನು ಟೀಕಿಸಿದ್ದಾರೆ.

ನಮ್ಮ ಪಕ್ಷದ ವಿಚಾರ ನಿಮಗೆ ಬೇಡ. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಬರುವರೆಗೆ ಸ್ವಾಗತ ಎಂದು ಡಿ.ಕೆ.ಶಿ ಹೇಳಿದ್ದಾರೆ. ಇದು ನಮ್ಮ ಪಕ್ಷದ ಆಂತರಿಕ ವಿಷಯ ಇದರ ಬಗ್ಗೆ ನೀವು ಮಾತನಾಡುವುದು ಸರಿಯಲ್ಲ. ನೀವು ಸಂಸದರಾಗಿ ಕ್ಷೇತ್ರಕ್ಕೆ ಏನು ಮಾಡಿದ್ದೀರಾ ಎಂಬುದನ್ನು ಮತದಾರರಿಗೆ ನೀಡಿ ಎಂದು ಶಿವುಯಾದವ್ ತಿಳಿಸಿದ್ದು, ಕಾಂಗ್ರೆಸ್ ಪಕ್ಷದ ತೇಜೋವದೇ ಮಾಡುವುದನ್ನು ನಿಲ್ಲಿಸಬೇಕು, ಮೋದಿ ಮ್ತತೋಮ್ಮೆ ಪ್ರಧಾನಿಯಾಗಬೇಕೆಂದು ಯಾರು ಸಹಾ ಬಯಸುತ್ತಿಲ್ಲ, ಎಲ್ಲರು ಮೋದಿ ಸರ್ಕಾರವನ್ನು ಬೈಯುತ್ತಿದ್ದಾರೆ. ರೈತರ, ಬಡವರ, ಹಿಂದುಳಿದ ವರ್ಗಗಳ, ಕಾರ್ಮಿಕರ ಬಗ್ಗೆ ಯಾವುದೇ ಕಾಳಜಿಯನ್ನು ವಹಿಸುತ್ತಿಲ್ಲ, ಶ್ರೀಮಂತರ ಪರವಾದ ಸರ್ಕಾರ ಇದಾಗಿದೆ ಎಂದು ದೂರಿದರು.

ಕೇಂದ್ರ ಬಿಜೆಪಿಯ ಸರ್ಕಾರದ ಬಗ್ಗೆ ಜನತೆ ರೋಸಿ ಹೋಗಿದ್ದಾರೆ. ಈ ಸರ್ಕಾರವನ್ನು ಕಿತ್ತು ಹಾಕಲು ಮುಂದಾಗಿದ್ದಾರೆ. ಮೋದಿಯವರ ಮುಂದೆ ಸಚಿವರಾಗಲು ಸಂಸದರಾಗಲೀ ಯಾವುದೇ ರೀತಿಯ ಮಾತನ್ನು ಆಡದೇ ಸುಮ್ಮನೆ ಇರುತ್ತಾರೆ ಇಲ್ಲಿ ಮಾತ್ರ ಮತದಾರರಿಗೆ ಸುಳ್ಳುನ್ನು ಹೇಳುವುದರ ಮೂಲಕ ಮೋಸ ಮಾಡುತ್ತಿದ್ದಾರೆ ಎಂದ ಶಿವುಯಾದವ್, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ವಿಜ್ಹನ್ ಎಂದು ಹೇಳಿತ್ತು ಆದರೆ ಮತದಾರ 66 ಕ್ಕೆ ಇಳಿಸಿದ್ದಾನೆ, ಇದೇ ರೀತಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಎಂದು ಗುರಿಯನ್ನು ಹೊಂದಿದೆ ಆದರೆ ಮತದಾರ 200 ಸದಸ್ಯ ಬಲವನ್ನು ಸಹಾ ದಾಟಲು ಬಿಡುವುದಿಲ್ಲ ಎಂದು ಭವಿಷ್ಯ ನುಡಿದರು.

ಗೋಷ್ಟಿಯಲ್ಲಿ ಚಿದಾನಂದ ಮೂರ್ತಿ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...