ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಅಕ್ಕಿ ವಿಚಾರವಾಗಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಕ್ಕಿ ನೀಡಲು ಕೇಳಿದ್ದಾರೆ. ಆದರೆ ಕೇಂದ್ರ ಸರ್ಕಾರದಿಂದ ಪಾಸಿಟಿವ್ ಆಗಿ ಉತ್ತರ ಸಿಕ್ಕಿಲ್ಲ. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ಅಂಡ್ ಟೀಂ ಇಂದು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಕೇಂದ್ರ ಸಚಿವರ ಭೇಟಿಗೆ ಅವಕಾಶ ಕೇಳಿದರೂ ಇನ್ನೂ ಸಿಕ್ಕಿಲ್ಲ. ಈ ಮಧ್ಯೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರನ್ನು ಭೇಟಿಯಾಗಿದ್ದಾರೆ.
ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿ, ಇಂದು ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗುವೆ. ಅಕ್ಕಿ ವಿಚಾರವಾಗಿ ಅಮಿತ್ ಶಾ ಬಳಿ ಪ್ರಸ್ತಾಪ ಮಾಡುತ್ತೇನೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಭೇಟಿಗೆ ಸಮಯ ಕೇಳಿಲ್ಲ. FCI ಅಕ್ಕಿ ಕೊಡಲು ಆಗಲ್ಲ ಎಂದಿದ್ದರೆ ಬೇರೆ ಕಡೆ ಚರ್ಚೆ ಮಾಡುತ್ತೇವೆ. ಅಕ್ಕಿ ಇಲ್ಲದಿದ್ದರೆ ಎಫ್ಸಿಐ ಜೂ.12ರಂದು ಯಾಕೆ ಪತ್ರ ಕೊಟ್ಟಿತು ಎಂದು ಪ್ರಶ್ನಿಸಿದರು.
ದೆಹಲಿಯಲ್ಲಿ ಆಹಾರ ಇಲಾಖೆ ಸಚಿವ K.H.ಮುನಿಯಪ್ಪ ಮಾತನಾಡಿ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಭೇಟಿಗೆ ಅವಕಾಶ ನೀಡುತ್ತಿಲ್ಲ. ಕಳೆದ ಮೂರು ದಿನಗಳಿಂದ ಭೇಟಿಗೆ ಕಾಲಾವಕಾಶ ನೀಡುತ್ತಿಲ್ಲ. ಕೇಂದ್ರ ರಾಜ್ಯ ಖಾತೆ ಸಚಿವರ ಭೇಟಿಗೆ ಕಾಲಾವಕಾಶ ನೀಡಿದ್ದರು. ನಾಳೆ ಬೆಳಗ್ಗೆ 10ಕ್ಕೆ ಭೇಟಿಗೆ ನೀಡಿದ್ದ ಅವಕಾಶವೂ ನಿರಾಕರಿಸಿದ್ದಾರೆ ಎಂದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್