ಕೇಂದ್ರ ಸಚಿವ ಕುಮಾರಸ್ವಾಮಿಗೆ ಮತ್ತೆ ಅನಾರೋಗ್ಯ ; ದೆಹಲಿ ಪ್ರವಾಸ ರದ್ದು

ಬೆಂಗಳೂರು; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತೆ ಅನಾರೋಗ್ಯ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ಪ್ರಯಾಣದ ಪ್ಲ್ಯಾನ್ ಗಳನ್ನು ರದ್ದು ಮಾಡಿದ್ದಾರೆ. ಇಂದಿನ ಸಂಸತ್ ಅಧಿವೇಶನದಲ್ಲೂ ಭಾಗಿಯಾಗಬೇಕಿತ್ತು. ಆದರೆ ಅನಾರೋಗ್ಯದ ಹಿನ್ನೆಲೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿಕೊಂಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತೀವ್ರ ಕಫ ಹಾಗೀ ಕೆಮ್ಮು ಹೆಚ್ಚಾಗಿದೆ. ಹೀಗಾಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದಾರೆ.

ಕಳೆದ ಮೂರ್ನಾಲ್ಕು ದಿನದಿಂದ ತುಮಕೂರು ರಸ್ತೆಯಲ್ಲಿರುವ ಜಿಂದಾಲ್ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಕಫ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಸದ್ಯ ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆಯಾಗಿದೆ ಎಂದೇ ಹೇಳಲಾಗುತ್ತಿದೆ. ಕಫ, ಕೆಮ್ಮು ವಿಚಾರಕ್ಕೆ ಕುಮಾರಸ್ವಾಮಿ ಅವರು ಚೆನ್ನೈಗೆ ತೆರಳಿ ಚಿಕಿತ್ಸೆಯನ್ನ ಪಡೆದುಕೊಂಡಿದ್ದರು. ಆದರೆ ಅಲ್ಲಿ ಅಷ್ಟಾಗಿ ಆರೋಗ್ಯ ಸುಧಾರಣೆಯಾಗಿಲ್ಲ. ಜೊತೆಗೆ ಕಫ, ಕೆಮ್ಮು ಕೂಡ ಕಡಿಮೆಯಾಗಿಲ್ಲ. ಹೀಗಾಗಿ ಜಿಂದಾಲ್ ನ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮಹಿಳಾ ದಿನಾಚರಣೆಯ ಕಾರ್ಯಕ್ರಮಕ್ಕೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೈರಾಗಿದ್ದರು. ಹಾಗೇ ಇಂದು ದೆಹಲಿಗೆ ಪ್ರಯಾಣ ಬೆಳೆಸುವುದಕ್ಕೆ ಕಾರ್ಯಕ್ರಮ ಸಿದ್ಧವಾಗಿತ್ತು. ಆದರೆ ಪ್ರಯಾಣವನ್ನು ರದ್ದು ಮಾಡಿಕೊಂಡಿದ್ದರು. ಈಗ ಕೊಂಚ ಆರೋಗ್ಯದಲ್ಲಿ ಸುಧಾರಣೆ ಕಂಡಿರೊ ಕಾರಣ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮತ್ತೆ ದೆಹಲಿಗೆ ಹೋಗುವ ಸಾಧ್ಯತೆ ಇದೆ. ಇನ್ನು ಕೇಂದ್ರ ಸಚುವರಾದ ಮೇಲೆ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಕ್ಕಾಪಟ್ಟೆ ಓಡಾಟ ನಡೆಸಿದ್ದರು. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪ್ರತ್ಯೇಕ ಭೇಟಿ ನೀಡಿ ಜನರ ಸಮಸ್ಯೆಗಳ ಬಗ್ಗೆ ಕೇಳುತ್ತಿದ್ದರು. ವಿಶ್ರಾಂತಿಯೇ ಪಡೆಯದೆ ಓಡಾಡುತ್ತಿದ್ದದ್ದು ಅವರ ಅನಾರೋಗ್ಯಕ್ಕೆ ಕಾರಣವಾಗಿತ್ತು.

suddionenews

Recent Posts

ಸೋಮಶೇಖರ್, ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆಗೊಳ್ಳುತ್ತಾರಾ..?

ಹುಬ್ಬಳ್ಳಿ; ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಬಿಜೆಪಿ ಪಕ್ಷದಲ್ಲಿಯೇ ಇದ್ರು ಕೂಡ ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೆ…

16 minutes ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

  ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 15 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಮಾರ್ಚ್. 15 ) ಹತ್ತಿ ಮಾರುಕಟ್ಟೆ…

2 hours ago

ಚಿತ್ರದುರ್ಗ ಪಿಎಸ್ಐ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ ಆರೋಪ

  ಚಿತ್ರದುರ್ಗ; ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ…

3 hours ago

ರುದ್ರಪ್ಪ ಲಮಾಣಿ ದಿಢೀರನೇ ಬೆಂಗಳೂರಿಗೆ ಶಿಫ್ಟ್

  ಬೆಂಗಳೂರು; ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಈಗಾಗಲೇ…

3 hours ago

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ, ಈ ರಾಶಿಯವರು ಸೋಲಿಲ್ಲದ ಸರದಾರನಾಗಿ ಮುಟ್ಟಿದ್ದೆಲ್ಲ ಚಿನ್ನ. ಶನಿವಾರದ ರಾಶಿ ಭವಿಷ್ಯ…

10 hours ago

ಹಿರಿಯೂರು ಬಳಿ ಉಪ ಸಭಾಪತಿಗೆ ಬೈಕ್ ಡಿಕ್ಕಿ : ಪ್ರಾಣಾಪಾಯದಿಂದ ಪಾರು

ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…

19 hours ago