ದಾವಣಗೆರೆ, ಫೆ.16 : ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಫೆಬ್ರವರಿ 25 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಫೆ.25 ರಂದು ಬೆಳಿಗ್ಗೆ 10.15 ಕ್ಕೆ ತೊಳಹುಣಸೆಗೆ ಆಗಮಿಸಿ ತೊಳಹುಣಸೆ ಮತ್ತು ಅನಗೋಡು ಹೊಸ ರೈಲ್ವೆ ಮಾರ್ಗವನ್ನು ಪರಿಶೀಲನೆ ಮಾಡುವವರು 11.15 ನಿಮಿಷಕ್ಕೆ ಅನಗೋಡು ರೈಲ್ವೆ ನಿಲ್ದಾಣವನ್ನು ಪರಿಶೀಲನೆ ಮಾಡುವರು. ನಂತರ 11.45 ಕ್ಕೆ ಅನಗೋಡು- ಹೆಬ್ಬಾಳು ಹೊಸ ರೈಲ್ವೆ ಮಾರ್ಗವನ್ನು ಪರಿಶೀಲನೆ ಮಾಡುವರು. ನಂತರ ಚಿತ್ರದುರ್ಗ ಭರಮಸಾಗರ ಮಾರ್ಗವನ್ನು ಪರಿಶೀಲನೆ ಮಾಡಿ ಚಿತ್ರದುರ್ಗಕ್ಕೆ ಪ್ರಯಾಣಿಸುವರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











