Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾಸನದಲ್ಲಿ ನಿಲ್ಲದ ಹಾರ್ಟ್ ಅಟ್ಯಾಕ್ : ಇಂದು ಆಟೋ ಚಾಲಕ ಬಲಿ..!

---Advertisement---

ಹಾಸನ: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹೃದಯಾಘಾತಗಳು ಜನರ ಆತಂಕಕ್ಕೆ ಕಾರಣವಾಗಿದೆ. ಒಂದಲ್ಲ ಎರಡಲ್ಲ ಒಂದೇ ತಿಂಗಳಲ್ಲಿ ಹೃದಯಾಘಾತದಿಂದ 15 ಮಂದಿ ಸಾವನ್ನಪ್ಪಿದ್ದಾರೆ. ಇಂದು ಕೂಡ ಅದೇ ಹೃದಯಾಘಾತಕ್ಕೆ ಒಬ್ಬರು ಬಲಿಯಾಗಿದ್ದು, ಈ ಮೂಲಕ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 16ಕ್ಕೆ ದಾಟಿದೆ.

37 ವರ್ಷದ ಗೋವಿಂದ ಎಂಬಾತ ಇಂದು ಹಾರ್ಟ್ ಅಟ್ಯಾಕ್ ಸಾವನ್ನಪ್ಪಿದ್ದಾರೆ. ಈತ ಸಿದ್ದೇಶ್ವರ ನಗರದ ನಿವಾಸಿಯಾಗಿದ್ದ. ಆಟೋ ಚಾಲಕನಾಗಿ ಜೀವನ ನಡೆಸುತ್ತಿದ್ದ. ಆಟೋ ಚಲಾಯಿಸುತ್ತಿರುವಾಗಲೇ ಇಂಥದ್ದೊಂದು ದುರ್ಘಟನೆ ನಡೆದಿದೆ. ಗೋವಿಂದು, ಆಟೋ ಓಡಿಸುತ್ತಿದ್ದಾಗ ಎದೆ ನೋವು ಬಂದಿದೆ. ತಕ್ಷಣ ಅವರೇ ಆಟೋ ಓಡಿಸಿಕೊಂಡು ಆಸ್ಪತ್ರೆಗೆ ಹೋಗಿದ್ದಾರೆ. ಆದರೆ ವಿಧಿ ಕಡೆಗೂ ಅವರ ಬದುಕಲ್ಲಿ ಆಟವಾಡಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹಾಸನ ಜಿಲ್ಲೆಯ ಜನಕ್ಕೆ ಇದೊಂತರ ಉತ್ತರ ಸಿಗದ ಪ್ರಶ್ನೆಯಾಗಿ ಕಾಡುತ್ತಿದೆ. ಒಂದೇ ತಿಂಗಳಲ್ಲಿ ಇಷ್ಟೊಂದು ಜನ ಅದು ಹಾರ್ಟ್ ಅಟ್ಯಾಕ್ ನಿಂದಾನೇ ಸಾಯುವುದಕ್ಕೆ ಕಾರಣವಾದರೂ ಏನು ಎಂಬ ಗೊಂದಲದಲ್ಲಿದ್ದಾರೆ. ಹೀಗೆ ಒಬ್ಬೊಬ್ಬರೇ ಸಾಯ್ತಾ ಇದ್ರೆ ಹೇಗೆ ಎಂಬ ಭಯವೂ ಅವರನ್ನ ಕಾಡುತ್ತಿದೆ. ಮೇ ಹಾಗೂ ಜೂನ್ ತಿಂಗಳಿನಿಂದ ಒಂದೇ ಸಮನೆ ಹಾರ್ಟ್ ಅಟ್ಯಾಕ್ ಆಗ್ತಾ ಇದೆ. ಈಗ ಗೋವಿಂದು ಸಾವನ್ನಪ್ಪಿದ್ದಾರೆ. ಆಟೋ ಓಡಿಸಿಕೊಂಡು ಹೇಗೋ ಜೀವನ ಮಾಡ್ತಾ ಇದ್ದರು. ಆದರೆ ಈಗ ಅವರ ಮನೆಯವರಿಗೆ ಆಸರೆ ಯಾರು ಎಂಬಂತಾಗಿದೆ. ಗೋವಿಂದು ಸಾವಿನಿಂದ ಇಡೀ ಮನೆಯವರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಗೋವಿಂದು ಶವದ ಮುಂದೆ ಮನೆಯವರು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಆ ಸಂಕಟ ನೋಡಿ ಗ್ರಾಮದವರು ಕಣ್ಣೀರಾಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment