Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

26/11 ಮುಂಬೈ ದಾಳಿ ವೇಳೆ ಕಾಂಗ್ರೆಸ್ ಸಂಯಮ ಪ್ರದರ್ಶಿಸಿತ್ತು : ಸಂಸದ ಮನೀಶ್ ತಿವಾರಿ

Facebook
Twitter
Telegram
WhatsApp

ನವದೆಹಲಿ: ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ತಾವೂ ಬರೆದ ಪುಸ್ತಕದಿಂದ ಹೊಸದೊಂದು ಚರ್ಚೆ ಹುಟ್ಟು ಹಾಕಿದ್ದಾರೆ. 26/11 ಮುಂಬೈ ದಾಳಿ ಬಗ್ಗೆ ಉಲ್ಲೇಖಿಸಿದ್ದಾರೆ. ಅಂದು ಕಾಂಗ್ರೆಸ್ ಸಂಯಮ ವಹಿಸಿತ್ತು. ಅದು ಕಾಂಗ್ರೆಸ್ ನ ಲಕ್ಷಣವಲ್ಲ ಎಂದು ಅವರ ಹೊಸ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

27/11 ಮುಂಬೈ ದಾಳಿಯಲ್ಲಿ ಲಷ್ಕರ್ ಎ ತೋಯ್ಬಾ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದರು. ಅಂದಿನ ಯುಪಿಎ ಸರ್ಕಾರ ಪಾಕ್ ಉಗ್ರರ ಮೇಲೆ ಕ್ರಮ ಕೈಗೊಳ್ಳಬೇಕಿತ್ತು. ಆದ್ರೆ ಆ ರೀತಿ ಮಾಡಲಿಲ್ಲ. ಬದಲಿಗೆ ಸಂಯಮ ವಹಿಸಿತ್ತು. ಆ ಸಂಯಮ ನಮ್ಮ ಸಾಮರ್ಥ್ಯದ ಲಕ್ಷಣವಲ್ಲ.‌ ಬದಲಿಗೆ ನಮ್ಮ ದೌರ್ಬಲ್ಯದ ಸಂಕೇತ.

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬರೆದ ಪುಸ್ತಕವನ್ನೇ ಆಧಾರವಾಗಿಟ್ಟುಕೊಂಡು ಅತ್ತ ಬಿಜೆಪಿ ಕಾಂಗ್ರೆಸ್ ವಿರುದ್ಧ ತಿರುಗೇಟು ನೀಡಲು ರೆಡಿಯಾಗಿದೆ. ಅಂದು ಕಾಂಗ್ರೆಸ್ ಪಾಕ್ ಉಗ್ರರ ಮೇಲೆ ಏನು ಕ್ರಮ ತೆಗೆದುಕೊಂಡಿಲ್ಲ ಎಂಬುದು, ಅವರ ಸಂಸದರೇ ಬರೆದ ಪುಸ್ತಕದಿಂದ ತಿಳಿದಿದೆ. ಉಗ್ರರರನ್ನು ಸದೆ ಬಡಿಯಲು ಅಂದಿನ ಸರ್ಕಾರ ಸೈನಿಕರಿಗೆ ಅನುಮತಿ ನೀಡಿರಲಿಲ್ಲ. ಒಬ್ಬ ಕಾಂಗ್ರೆಸ್ ಸಂಸದ ತನ್ನ ಪುಸ್ತಕದಲ್ಲಿ 26/11 ಮುಂಬೈ ದಾಳಿಯಲ್ಲಿ ಯುಪಿಎ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿರುವುದು ಕಾಂಗ್ರೆಸ್ ನ ವೈಪಲ್ಯವನ್ನ ಎತ್ತಿ ತೋರಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟೀಯಾ ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!