Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜಯಲಕ್ಷ್ಮೀ ದರ್ಶನ್ ದೂರಿನ ಅಪ್ಡೇಟ್ : ದಾವಣಗೆರೆಯ ಇಂಜಿನಿಯರ್ ಸೇರಿ ಇಬ್ಬರು ಅರೆಸ್ಟ್..!

---Advertisement---

 

ಬೆಂಗಳೂರು: ವಿಜಯಲಕ್ಷ್ಮೀ ದರ್ಶನ್ ಅವರಿಗೆ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಕೆಟ್ಟ ಕೆಟ್ಟ ಕಮೆಂಟ್ ಗಳು ಬಂದಿದ್ದವು. ಆ ಸಂಬಂಧ ಪೊಲೀಸ್ ಕಮಿಷನರ್ ಕಚೇರಿಗೆ ದೂರು ನೀಡಿದ್ದ ವಿಜಯಲಕ್ಷ್ಮೀ ಅವರು, ಕಾನೂನು ಹೋರಾಟ ನಡೆಸಿದ್ದರು. ಆದರೆ ದೂರು ಕೊಟ್ಟು ಕೆಲ ದಿನಗಳು ಕಳೆದರು ಸಹ, ಪೊಲೀಸರು ಯಾರನ್ನು ಬಂಧಿಸಿರಲಿಲ್ಲ. ಹೀಗಾಗಿ ಮೊನ್ನೆಯಷ್ಟೇ ಮತ್ತೆ ಕಮಿಷನರ್ ಕಚೇರಿಗೆ ಭೇಟಿ ನೀಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಬೇಸರವನ್ನ ಹೊರ ಹಾಕಿದ್ದರು. ನನ್ನ ದೂರನ್ನ ಕಂಪ್ಲೀಟ್ ಆಗಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದಿದ್ದರು. ಈ ಬೆನ್ನಲ್ಲೇ ಇಬ್ಬರು ಅರೆಸ್ಟ್ ಆಗಿದ್ದಾರೆ.

ಬಂಧಿತ ಆರೋಪಿಗಳು, 45 ವರ್ಷದ ಚಂದ್ರಶೇಖರ್ ಹಾಗೂ 31 ವರ್ಷದ ನಿತಿನ್ ಬಂಧಿತ ಆರೋಪಿಗಳು. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಿನ್ನಲೆಯಲ್ಲಿ ಇಬ್ಬರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ. ಬಂಧಿತರಲ್ಲಿ ಒಬ್ಬ ಆಟೋ ಚಾಲಕನಾಗಿದ್ದಾರೆ. ಮತ್ತು ಮತ್ತೊಬ್ಬ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾನೆ. ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿರುವ ಚಂದ್ರಶೇಖರ್ ಬೆಂಗಳೂರಿನ ಚಿಕ್ಕಬಾಣಾವರದ ನಿವಾಸಿಯಾಗಿದ್ದಾನೆ. ನಿತಿನ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ದಾವಣಗೆರೆಯ ನಿವಾಸಿಯಾಗಿದ್ದಾನೆ.

ಇಬ್ಬರು ಆರೋಪಿಗಳು ಫೇಸ್​ಬುಕ್ ಹಾಗೂ ಇನ್​ಸ್ಟಾಗ್ರಾಮ್​​ನಲ್ಲಿ ಅಶ್ಲೀಲ ಕಾಮೆಂಟ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಅಶ್ಲೀಲ ಮೆಸೇಜ್ ಹಾಗೂ ಪೋಸ್ಟ್ ವಿರುದ್ಧ ದರ್ಶನ್ ಪತ್ನಿ ಇತ್ತೀಚೆಗೆ ಸೈಬರ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಈ ಮೊದಲು ರಮ್ಯಾ ಅವರು ಕೂಡ ತಮ್ಮ ಬಗ್ಗೆ ಕಮೆಂಟ್ ಹಾಕಿದ್ದವರ ವಿರುದ್ಧ ದೂರು ನೀಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...