Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಂಧನದ ಭೀತಿಯಲ್ಲಿರುವ ಉಪೇಂದ್ರ : ನೋಟೀಸ್ ಬೆನ್ನಲ್ಲೇ ನಾಪತ್ತೆ..!

---Advertisement---

 

ಬೆಂಗಳೂರು: ನಟ ಉಪೇಂದ್ರ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಫೇಸ್ ಬುಕ್ ಲೈವ್ ನಲ್ಲಿ ಊರಿದ್ದ ಕಡೆ ಹೊಲಗೇರಿ ಇದ್ದೆ ಇರುತ್ತೆ ಎಂಬ ಗಾದೆ ಮಾತು ಹೇಳಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ. ಸದ್ಯ ಉಪೇಂದ್ರ ಅವರು ಉತ್ತರಿಸಬೇಕಿದೆ. ಆದರೆ ಅವರ ಸುಳಿವೇ ಇಲ್ಲ.

ಕತ್ರುಗುಪ್ಪೆ ಹಾಗೂ ಸದಾಶಿವನಗರದ ಮನೆಗೆ ನೋಟೀಸ್ ನೀಡಲಾಗಿದೆ. ಚೆನ್ನಮ್ಮ‌ಅಚ್ಚುಕಟ್ಟೆ ಪೊಲೀಸರು ಕೂಡ ಉಪೇಂದ್ರ ಅವರ ಹುಡುಕಾಟದಲ್ಲಿದ್ದಾರೆ. ಇಂದು ಬೆಳಗ್ಗೆ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಆದ್ರೆ ಉಪೇಂದ್ರ ಅವರು ನೋಟೀಸ್ ಗೂ ಉತ್ತರಿಸದೆ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಉಪೇಂದ್ರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಾದರೂ ಬಂಧಿಸಬಹುದು. ಅವರ ವಿರುದ್ಧ ಜಾಮೀನು ರಹಿತ ಕೇಸ್ ದಾಖಲಾಗಿದೆ. ಅಟ್ರಾಸಿಟಿ ಸೆಕ್ಷನ್ 3(1) (r) (s) ಅಡಿ ಕೇಸ್ ದಾಖಲಾಗಿದೆ. ಇದರಲ್ಲಿ ಸೆಕ್ಷನ್ 3(1) ದಲಿತನಲ್ಲದ ವ್ಯಕ್ತಿಯಿಂದ ದಲಿತರಿಗೆ ನಿಂದನೆ ಆರೋಪವಿದೆ. 3(1)(r)- ಉದ್ದೇಶ ಪೂರ್ವಕವಾಗಿ ಸಾರ್ವಜನಿಕವಾಗಿ ನಿಂದನೆ, 3(1)(r)(s) ಸಾರ್ವಜನಿಕರಿಗೆ ತಿಳಿಯುವ ಉದ್ದೇಶದಿಂದ ನಿಂದನೆ ಕೇಸ್ ಹಾಕಲಾಗಿದೆ.

ಈ ಪ್ರಕರಣದಲ್ಲಿ 6 ತಿಂಗಳಿನಿಂದ 5 ವರ್ಷದ ತನಕ ಜೈಲು ಶಿಕ್ಷೆ & ದಂಡ ವಿಧಿಸುವ ಸಾಧ್ಯತೆಯಿದೆ. ಐಪಿಸಿ ಸೆಕ್ಷನ್ 505(1)(c) ಪ್ರಕಾರ ಧರ್ಮ, ಜನಾಂಗದ ಬಗ್ಗೆ ತಪ್ಪಾಗಿ ಹೇಳಿಕೆ ಪಬ್ಲಿಷ್ ಮಾಡುವುದು ಅಪರಾಧವಾಗಿದೆ. ಇದರಲ್ಲಿ 3 ವರ್ಷದ ತನಕ ಜೈಲು ಶಿಕ್ಷೆ ವಿಧಿಸಬಹುದಾಗಿದೆ. IPC 153A- ಜಾತಿ ಧರ್ಮಗಳ ನಡುವೆ ದ್ವೇಷ ಬಿತ್ತುವುದು ಸೇರಿದೆ. ಇದರ ಪ್ರಕಾರ 5 ವರ್ಷದ ಜೈಲು ಶಿಕ್ಷೆ & ದಂಡ ವಿಧಿಸಬಹುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment