Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾ ಮೇಲ್ದಂಡೆ ವಿಚಾರ : ಪಿಎಂ ಭೇಟಿಗೆ ರೈತ ಸಂಘ ಪ್ಲ್ಯಾನ್: ತರಳಬಾಳು ಸ್ವಾಮೀಜಿಯಿಂದ ಸಿಗುತ್ತಾ ಬೆಂಬಲ..?

---Advertisement---

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸರ್ಕಾರ ತಮ್ಮ ಬಜೆಟ್ ನಲ್ಲಿ ಸುಮಾರು 5,300 ಕೋಟಿ ರೂಪಾಯಿ ಅನುದಾನವನ್ನ ಘೋಷಣೆ ಮಾಡಿತ್ತು. ಅದು 2022ರಲ್ಲಿ. ಆದರೆ ಇಲ್ಲಿಯವರೆಗೂ ಅದು ಘೋಷಣೆಯಾಗಿಯೇ ಉಳಿದಿದೆ ವಿನಃ ಭದ್ರಾ ಮೇಲ್ದಂಡೆ ಯೋಜನೆಗಾಗಿ ಹಣ ಬಂದಿಲ್ಲ. ಈ ಭದ್ರಾ ಮೇಲ್ದಂಡೆ ಯೋಜನೆ ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ತುಮಕೂರು ಭಾಗದ ರೈತರ ಆಶಾ ಕಿರಣವಾಗಿದೆ. ಹೀಗಾಗಿ ಯೋಜನೆಗೆ ಬರಬೆರಕಾದ ಹಣ ನೀಡದ ಕೇಂದ್ರ ಸರ್ಕಾರದ ವಿರುದ್ಧ ರೈತರು ಗರಂ ಆಗಿದ್ದಾರೆ.

ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ದೆಹಲಿಗೆ ತೆರಳಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಅದಕ್ಕೂ ಮುನ್ನ ತರಳಬಾಳು ಮಠದ ಸದ್ಧರ್ಮ ನ್ಯಾಯಪೀಠದಲ್ಲಿ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳನ್ನು ರೈತರು ಭೇಟಿಯಾಗಿದ್ದಾರೆ. ನಮಗೆ, ನಮ್ಮ ಹೋರಾಟಕ್ಕೆ ಬೆಂಬಲ ನೀಡಿ ಎಂದು ಕೇಳಿಕೊಂಡಿದ್ದಾರೆ.

ಕೇಂದ್ರ ಸರ್ಕಾರ ಏನು ಘೋಷಣೆ ಮಾಡಿದೆ, ಆ ಹಣವನ್ನ ಬಿಡುಗಡೆ ಮಾಡಿದರೆ ಕೆಲಸವೂ ಚುರುಕುಗೊಳ್ಳಲಿದೆ. ಹಾಗಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡುತ್ತೇವೆ. ಈಗಾಗಲೇ ಸಂಸದ ಗೋವಿಂದ ಕಾರಜೋಳ ಅವರಿಗೂ ಮನವಿಯನ್ನ ಮಾಡಿದ್ದೇವೆ. ಅವರು ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು, ಮಧ್ಯ ಕರ್ನಾಟಕ ಭಾಗದಲ್ಲಿ ಹಲವು ಏತ ನೀರಾವರಿಗಳನ್ನ ಯಶಸ್ವಿಗೊಳಿಸಿದ್ದಾರೆ. ಹೀಗಾಗಿ ಅವರು ರೈತರ ಪಾಲಿನ ಆಶಾ ಕಿರಣವಾಗಿದ್ದಾರೆ. ಹಾಗೆ ಸ್ವಾಮೀಜಿಗಳ ಬೆಂಬಲವೂ ಸಿಗಬೇಕು ಎಂದು ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್ ಆರ್ ತಿಮ್ಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment