Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭದ್ರಾಮೇಲ್ದಂಡೆ ಯೋಜನೆ : ಇನ್ನೆರಡು ಮೂರು ದಿನಗಳಲ್ಲಿ ಘೋಷಿತ ಅನುದಾನ ಬಿಡುಗಡೆಗೊಳಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರ : ರೈತರ ಎಚ್ಚರಿಕೆ…!

---Advertisement---

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.07  : ಭದ್ರಾಮೇಲ್ದಂಡೆ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಕಾಯ್ದಿರಿಸಿ ಬಿಡುಗಡೆಗೊಳಿಸದ ಕೇಂದ್ರ ಸರ್ಕಾರದ ವಿರುದ್ದ ಜಿಲ್ಲಾ ಪಂಚಾಯಿತಿ ಮುಂಭಾಗ ಕಳೆದ ಮೂರು ದಿನಗಳಿಂದಲೂ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಅಖಂಡ ಕರ್ನಾಟಕ ರೈತ ಸಂಘ ಮತ್ತು ವಿವಿಧ ಜನಪರ ಸಂಘಟನೆಗಳಿಂದ ಬುಧವಾರ ಕೆ.ಎಸ್.ಆರ್.ಟಿ.ಸಿ. ಬಸ್‍ನಿಲ್ದಾಣದಲ್ಲಿ ಸಭೆ ನಡೆಸಿ ಭದ್ರಾಮೇಲ್ದಂಡೆ ಯೋಜನೆ ವಿಳಂಭವಾಗುತ್ತಿರುವುದರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೊಳಲ್ಕೆರೆ ಅಧ್ಯಕ್ಷ ರಂಗಸ್ವಾಮಿ ಸಭೆಯನ್ನುದ್ದೇಶಿಸಿ ಮಾತನಾಡುತ್ತ ಭದ್ರಾಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಕಾಯ್ದಿರಿಸಿರುವ ಕೇಂದ್ರ ಸರ್ಕಾರ ಒಂದು ವರ್ಷವಾದರೂ ಇನ್ನು ಹಣ ಬಿಡುಗಡೆಗೊಳಿಸಿಲ್ಲ. ಬರಪೀಡಿತ ಪ್ರದೇಶ ಮಧ್ಯಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರು ಮಳೆಯನ್ನಾಧರಿಸಿ ಕೃಷಿ ಮಾಡುತ್ತಿದ್ದಾರೆ.

ಬರಗಾಲದಿಂದ ಬಿತ್ತಿದ ಬೆಳೆಗಳು ಸಂಪೂರ್ಣವಾಗಿ ಒಣಗಿ ನಷ್ಟ ಅನುಭವಿಸುತ್ತಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದೊಂದೆ ಉಳಿದಿರುವ ದಾರಿ. ಕಳೆದ ಮೂವತ್ತು ನಲವತ್ತು ವರ್ಷಗಳಿಂದಲೂ ನೀರಾವರಿಗಾಗಿ ಜಿಲ್ಲೆಯ ರೈತರು ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ಬರೀ ಆಶ್ವಾಸನೆ ನೀಡುತ್ತಲೆ ವಂಚಿಸಿಕೊಂಡು ಬರುತ್ತಿವೆ. ಇನ್ನೆರಡು ಮೂರು ದಿನಗಳಲ್ಲಿ ಹಣ ಬಿಡುಗಡೆಗೊಳಿಸಿ ಭದ್ರಾಮೇಲ್ದಂಡೆ ಕಾಮಗಾರಿಗೆ ಚುರುಕಿನ ಚಾಲನೆ ನೀಡದಿದ್ದರೆ ದನ-ಕರುಗಳನ್ನು ತಂದು ಜಿಲ್ಲಾ ಪಂಚಾಯಿತಿಯಲ್ಲಿರುವ ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಕಚೇರಿ ಮುಂದೆ ಕಟ್ಟಲಾಗುವುದೆಂದು ಎಚ್ಚರಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಡಿ.ಎಸ್.ಹಳ್ಳಿ, ಕಾರ್ಯದರ್ಶಿ ರಾಮರೆಡ್ಡಿ, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಸತೀಶ್, ಟಿ.ಎಮ್ಮಿಗನೂರು ಜಯಣ್ಣ, ಅನ್ನಪೂರ್ಣ, ತುಳಜಮ್ಮ, ಚಂದ್ರಮೌಳಿ, ನಿರಂಜನಮೂರ್ತಿ ಇನ್ನು ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment