Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭದ್ರಾ ಮೇಲ್ದಂಡೆ ಯೋಜನೆ | 5300 ಕೋಟಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿ : ಬಿ.ಎನ್.ಚಂದ್ರಪ್ಪ ಒತ್ತಾಯ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ.25 : “ಮಧ್ಯ ಕರ್ನಾಟಕದ ಬಯಲು ಸೀಮೆಯ ಪ್ರದೇಶಗಳಿಗೆ ನೀರೊದಗಿಸುವ ರಾಜ್ಯ ಸರ್ಕಾರದ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ  ಸಂಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ರಾಷ್ಟ್ರೀಯ ಯೋಜನೆ ಎಂದು ಘೋಷಿಣೆ ಮಾಡಿ 5300 ಕೋಟಿ ಹಣ ಒದಗಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಇನ್ನು ಒಂದು ಪೈಸೆ ಹಣ ನೀಡಿಲ್ಲ. ನಾಲ್ಕೂ ಜಿಲ್ಲೆಗಳಿಗೆ ಅನುಕೂಲವಾಗಲಿರುವ ಈ ಯೋಜನೆಗೆ  ತಕ್ಷಣವೇ  ಎಚ್ಚೆತ್ತುಕೊಂಡ ಅನುದಾನ ಬಿಡುಗಡೆ ಮಾಡಬೇಕು ಎಂದು ಕೆ.ಪಿ.ಸಿ.ಸಿ.ಕಾರ್ಯಧ್ಯಕ್ಷರು ಹಾಗೂ ಮಾಜಿ ಸಂಸದರಾದ ಬಿ.ಎನ್ .ಚಂದ್ರಪ್ಪ  ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ವ್ಯಾಪ್ತಿಗೆ ಪಡೆದು ಹಲವು ವರ್ಷ ಕಳೆದರು ಸಹ ಯಾವುದೇ ಹಣ ಬಿಡುಗಡೆ ಮಾಡಿಲ್ಲ.

ಕೇಂದ್ರ ಸರ್ಕಾರ  ಭದ್ರಾ ಯೋಜನೆ ತ್ವರಿತ ಕಾಮಗಾರಿಗೆ ಹಣ ಒದಗಿಸಬೇಕು. ಭದ್ರಾ ಹೋರಟ ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕ ಮಂಗಳೂರು ಜಿಲ್ಲೆಗೆ ಭದ್ರಾ ಯೋಜನೆ ಅನುಕೂಲ ಪಡೆಯಲಿವೆ. ನಾಲ್ಕು ಜಿಲ್ಲೆ 12 ತಾಲೂಕು 367 ಕೆರೆ ತುಂಬಿಸುವ ಯೋಜನೆಯಾಗಿದೆ. 2022 ರಲ್ಲಿ 21647 ಕೋಟಿಗೆ ಪರಿಷ್ಕೃತಗೊಳಿಸಿ ರಾಷ್ಟ್ರೀಯ ಯೋಜನೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಬಿಜೆಪಿ ಸರ್ಕಾರ 2023 ರಲ್ಲಿ ಕೇಂದ್ರಕ್ಕೆ ಕಳಿಸಿ ಅಗತ್ಯವಾದ ಎಲ್ಲಾ ಮಾಹಿತಿ ರಾಜ್ಯ ಸರ್ಕಾರ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...