Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸದನದಲ್ಲಿ ಆರಂಭದಲ್ಲಿಯೇ ಗದ್ದಲ : ಮಧ್ಯಾಹ್ನಕ್ಕೆ ಕಲಾಪ ಮುಂದೂಡಿಕೆ

---Advertisement---

 

ಬೆಂಗಳೂರು: ಇಂದು ಎರಡನೇ ದಿನದ ಕಲಾಪ ಆರಂಭವಾಗಿದೆ. ಆದರೆ ಕಾಂಗ್ರೆಸ್ ಗ್ಯಾರಂಟಿಗಳ ವಿಚಾರಕ್ಕೆ ಗದ್ದಲ ಶುರುವಾಗಿದ್ದು, ಕಲಾಪ‌ ಮುಂದೂಡಿಕೆಯಾಗಿದೆ. ಸರ್ಕಾರದ ನಿಲುವಳಿ ಸೂಚನೆ ಕುರಿತಂತೆ ಬಿಜೆಪಿ ಪ್ರಸ್ತಾಪಿಸಿದ ಬೆನ್ನಲ್ಲೇ ಕಾಂಗ್ರೆಸ್ಸಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕ ಕೋಟಾ‌ ಶ್ರೀನಿವಾಸ ಪೂಜಾರಿ ನಿಲುವಳಿ ಮಂಡನೆ‌ ಮಾಡಲು ಮುಂದಾಗಿದ್ದಾರೆ. ಇದೆ ವೇಳೆ ಪ್ರಶ್ನೋತ್ತರ ಕಲಾಪ ಮುಗಿದ ಮೇಲೆ ನಿಲುವಳಿ ಮಂಡಿಸಿ ಎಂದು ಸಭಾಪತಿ ಪ್ರಾಣೇಶ್ ತಿಳಿಸಿದರು. ನಿಮಗೆ ನಿಯಮಾವಳಿಗಳು ಗೊತ್ತಿದೆ ಅಲ್ವಾ. ನೀವು ಕೊಟ್ಟ ಮೇಲೆ ನಿಲುವಳಿ ಸೂಚನೆಯನ್ನ ಪರಿಶೀಲನೆ ಮಾಡಿ. ಯಾವ ರೀತಿ ಅವಕಾಶ ನೀಡಬೇಕು ಎಂಬುದನ್ನು ತೀರ್ಮಾನ ಮಾಡ್ತೀವಿ ಎಂದು ಎಂ ಕೆ ಪ್ರಾಣೇಶ್ ಹೇಳಿದ್ದಾರೆ.

ಕಾಂಗ್ರೆಸ್​​ ಸದಸ್ಯರಿಂದ ಬಿಜೆಪಿ ವಿರುದ್ಧ ವಿರೋಧ ವ್ಯಕ್ತವಾಗಿದೆ. ಪರಿಷತ್ ಕಲಾಪದಲ್ಲಿ ಗದ್ದಲ, ಮಾತಿನ ಚಕಮಕಿ ನಡೆದಿದೆ. ಸದನದ ಗದ್ದಲದ ನಡುವೆ ಸಭಾಪತಿಗಳು ಪರಿಷತ್ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...