ಬೆಂಗಳೂರು: ಇಂದು ಎರಡನೇ ದಿನದ ಕಲಾಪ ಆರಂಭವಾಗಿದೆ. ಆದರೆ ಕಾಂಗ್ರೆಸ್ ಗ್ಯಾರಂಟಿಗಳ ವಿಚಾರಕ್ಕೆ ಗದ್ದಲ ಶುರುವಾಗಿದ್ದು, ಕಲಾಪ ಮುಂದೂಡಿಕೆಯಾಗಿದೆ. ಸರ್ಕಾರದ ನಿಲುವಳಿ ಸೂಚನೆ ಕುರಿತಂತೆ ಬಿಜೆಪಿ ಪ್ರಸ್ತಾಪಿಸಿದ ಬೆನ್ನಲ್ಲೇ ಕಾಂಗ್ರೆಸ್ಸಿಗರು ವಿರೋಧ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ನಿಲುವಳಿ ಮಂಡನೆ ಮಾಡಲು ಮುಂದಾಗಿದ್ದಾರೆ. ಇದೆ ವೇಳೆ ಪ್ರಶ್ನೋತ್ತರ ಕಲಾಪ ಮುಗಿದ ಮೇಲೆ ನಿಲುವಳಿ ಮಂಡಿಸಿ ಎಂದು ಸಭಾಪತಿ ಪ್ರಾಣೇಶ್ ತಿಳಿಸಿದರು. ನಿಮಗೆ ನಿಯಮಾವಳಿಗಳು ಗೊತ್ತಿದೆ ಅಲ್ವಾ. ನೀವು ಕೊಟ್ಟ ಮೇಲೆ ನಿಲುವಳಿ ಸೂಚನೆಯನ್ನ ಪರಿಶೀಲನೆ ಮಾಡಿ. ಯಾವ ರೀತಿ ಅವಕಾಶ ನೀಡಬೇಕು ಎಂಬುದನ್ನು ತೀರ್ಮಾನ ಮಾಡ್ತೀವಿ ಎಂದು ಎಂ ಕೆ ಪ್ರಾಣೇಶ್ ಹೇಳಿದ್ದಾರೆ.
ಕಾಂಗ್ರೆಸ್ ಸದಸ್ಯರಿಂದ ಬಿಜೆಪಿ ವಿರುದ್ಧ ವಿರೋಧ ವ್ಯಕ್ತವಾಗಿದೆ. ಪರಿಷತ್ ಕಲಾಪದಲ್ಲಿ ಗದ್ದಲ, ಮಾತಿನ ಚಕಮಕಿ ನಡೆದಿದೆ. ಸದನದ ಗದ್ದಲದ ನಡುವೆ ಸಭಾಪತಿಗಳು ಪರಿಷತ್ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…