Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುಪಿ + ಯೋಗಿ = ಉಪಯೋಗಿ: ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಹೊಗಳಿದ ಪ್ರಧಾನಿ ಮೋದಿ

Facebook
Twitter
Telegram
WhatsApp

ಲಖನೌ:  ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಉತ್ತರ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. 

ಇದರ ಭಾಗವಾಗಿ 36,230 ಕೋಟಿ ರೂ.ಗಳ ಗಂಗಾ ಎಕ್ಸ್ ಪ್ರೆಸ್ ವೇ ಯೋಜನೆಗೆ ಪ್ರಧಾನಿ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು.ಈ ವೇಳೆ ಮೋದಿಯವರು ತಮ್ಮದೇ ಶೈಲಿಯಲ್ಲಿ ಭಾಷಣ ಮಾಡಿ, ತಮ್ಮ ಛಾಪು ಮೂಡಿಸಿದರು. ಈ ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಡಳಿತ ವೈಖರಿಯ ಬಗ್ಗೆ ಹೊಗಳಿಕೆಯ ಸುರಿಮಳೆಗೈದರು. ಮತ್ತು ಪ್ರತಿಪಕ್ಷಗಳನ್ನು ತಮ್ಮದೇ ಆದ ಧಾಟಿಯಲ್ಲಿ ತರಾಟೆಗೆ ತೆಗೆದುಕೊಂಡರು.

ರಾಜ್ಯದಲ್ಲಿ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್ ಒಂದು ನೆಲಸಮ ಮಾಡುತ್ತಿದೆ. ಇದರಿಂದಾಗಿ ಆ ಮಾಫಿಯಾವನ್ನು ನಂಬಿದವರಿಗೆ ತೊಂದರೆಯಾಗುತ್ತಿದೆ. ಆದರೆ ಜನರು ಮಾತ್ರ ಜನರು ಸಂತಸಗೊಂಡಿದ್ದಾರೆ. ಅದಕ್ಕೇ ಜನರು ಯುಪಿ + ಯೋಗಿ = ಉಪಯೋಗಿ (ಬಹಳ ಉಪಯುಕ್ತ) ಎಂದು ಹೇಳುತ್ತಿದ್ದಾರೆ ಎಂದು ಹಾಸ್ಯ ಚಟಾಕಿ ಹಾರಿಸಿ ಎಲ್ಲರ ಮನಗೆದ್ದರು.

ಇತ್ತೀಚೆಗೆ ನಡೆದ ಐಟಿ ದಾಳಿಯ ಬಗ್ಗೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಟೀಕಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಮೋದಿ, ಈ ಹಿಂದೆ ಅಭಿವೃದ್ಧಿ ಮತ್ತು ಯೋಜನೆಗಳ ಹೆಸರಿನಲ್ಲಿ ಸಾರ್ವಜನಿಕರ ಹಣವನ್ನು ಹೇಗೆ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಅವೆಲ್ಲವೂ ಕಾಗದದಲ್ಲಿ ಮಾತ್ರ ಕಾಣಿಸುತ್ತಿದ್ದವು. ಮತ್ತು ಅವರ ಜೇಬುಗಳು  ಮಾತ್ರ ತುಂಬುತ್ತಿದ್ದವು. ಆದರೆ ಈಗ ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ಜನರ ಹಣ ಬಳಕೆಯಾಗುತ್ತಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!