Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ನಾಳೆ ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ : ಸಿಲ್ಕ್ಸ್ ಸೀರೆಗಳು, ಬೆಳ್ಳಿ ಹಾಗೂ ವಿವಿಧ ಹರಳುಗಳ ಆಭರಣಗಳು ಸೇರಿದಂತೆ ಏನೆಲ್ಲಾ ಇರುತ್ತೆ ? ಇಲ್ಲಿದೆ ಸಂಪೂರ್ಣ ಮಾಹಿತಿ…!

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.10 : ದಸರಾ ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಉಮಾಪತಿ ಚೌಲ್ಟ್ರಿ ಸಭಾಂಗಣದಲ್ಲಿ ನಾಳೆ (ಅಕ್ಟೋಬರ್.11 ರಂದು) ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.

ವಿವಿಧ ರಾಜ್ಯಗಳ ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳು, ಗ್ರಾಮೋದ್ಯೋಗ ಉತ್ಪನ್ನಗಳ ಪ್ರದರ್ಶನ ಹಾಗೂ
ಪ್ರಸಿದ್ಧ ಬ್ರಾಂಡ್‌ಗಳ ವಸ್ತುಗಳು ಇಲ್ಲಿ ದೊರೆಯಲಿವೆ. ವಾರಣಾಸಿಯಲ್ಲಿ ಕೈಮಗ್ಗದಿಂದ ನೇಯ್ದು ತರಲಾದ ಬನಾರಸ್ ಸಿಲ್ಕ್ಸ್ ಹಾಗೂ ಕಾಟನ್ ಸೀರೆಗಳು, ಫ್ಯಾಷನ್ ಡಿಸೈನ್‌ರ ಫ್ಯಾನ್ಸಿ ಸೀರೆ ರೂ. 1,100 ರಿಂದ 28 ಸಾವಿರ ರೂ.ವರೆಗಿನ ಉತ್ಪನ್ನಗಳು ಇಲ್ಲಿ ಲಭ್ಯವಿರುತ್ತದೆ.  ಹಾಗೂ ಸಿಲ್ಕ್ಸ್ ಸೀರೆಗಳು, ಬೆಳ್ಳಿ ಹಾಗೂ ವಿವಿಧ ಹರಳುಗಳಿಂದ ಸಿದ್ಧಗೊಂಡ ಆಭರಣಗಳು, ಬೆಂಗಳೂರಿನ ಸಂಚಯ ಡಿಸೈನರ್ ಕುರ್ತೀಸ್, ಕೊಯಮತ್ತೂರು ಡ್ರೀಮ್ ಸ್ಟುಡಿಯೋ ಸಿದ್ಧಪಡಿಸಿದ ಸೂಪರ್ ಸೈಜ್ ಬೆಡ್‌ಶಿಟ್‌ಗಳು,ಡಿಸೈನರ್ ಕೈಚೀಲಗಳು, ಸೌಂದರ್ಯ ವರ್ಧಕ ಸಾಧನೆಗಳು, ಬ್ರಾಂಡೆಡ್ ಮಕ್ಕಳ ಉಡುಪುಗಳು ಸಹ ಇಲ್ಲಿ ದೊರೆಯುತ್ತವೆ.

ಕೇವಲ ಒಂದು ದಿನದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವಾಗಿರುವುದರಿಂದ ಈ ಸುವರ್ಣ ಅವಕಾಶವನ್ನು ಚಿತ್ರದುರ್ಗದ ಜನತೆ ಸದುಪಯೋಗ ಪಡಿಸಿಕೊಳ್ಳಲು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

error: Content is protected !!