Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉರಿಗೌಡ – ನಂಜೇಗೌಡ ಸಿನಿಮಾ ಇದೀಗ ಆದಿಚುಂಚನಗಿರಿ ಅಂಗಳಕ್ಕೆ..!

---Advertisement---

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ಉರಿಗೌಡ ಮತ್ತು ನಂಜೇಗೌಡ ಸಿಕ್ಕಾಪಟ್ಟೆ ಸದ್ದು ಮಾಡುತ್ತಾ ಇದ್ದಾರೆ. ಅಶ್ವತ್ಥ್ ನಾರಾಯಣ್ ಅವರು ಅದ್ಯಾವಾಗ ಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಅಂದ್ರೋ ಅಂದಿನಿಂದಾನೂ ಈ ವಿಚಾರ ಚಾಲ್ತಿಯಲ್ಲಿದೆ.

ಅಷ್ಟೆ ಅಲ್ಲ ಇದೃ ಹೆಸರಿನಲ್ಲಿ ಸಿನಿಮಾ ಮಾಡುವುದಾಗಿ ಸಚಿವ ಮುನಿರತ್ನ ಘೋಷಣೆ ಮಾಡಿದ್ದಾರೆ. ಸಿನಿಮಾ ಶೂಟಿಂಗ್ ಯಾವಾಗ ಎಂಬುದನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಬಿಜೆಪಿ ನಾಯಕರ ಸಿನಿಮಾ ಮಾಡುವ ವರ್ತನೆಗೆ ವಿರೋಧ ವ್ಯಕ್ತಪಡಿಸಿದರು. ಇದು ಒಕ್ಕಲಿಗ ಸಮುದಾಯಕ್ಕೆ ಮಾಡುವ ಅವಮಾನ ಎಂದು ಹೇಳಿದ್ದರು. ಇದೀಗ ಈ ವಿಚಾರಕ್ಕೆ ಆದಿಚುಂಚನಗಿರಿ ಅಂಗಳಕ್ಕೆ ಸಮಸ್ಯೆ ಹೋಗಿದೆ.

ನಾಳೆ ಆದಿಚುಂಚನಗಿರಿ ಶ್ರೀಗಳನ್ನು ಮುನಿರತ್ನ ಅವರು ಭೇಟಿಯಾಗಲಿದ್ದಾರೆ. ಭೇಟಿಯ ಬಳಿಕ ಮುಂದಿನ ನಿರ್ಧಾರ ತಿಳಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವ ಮುನಿರತ್ನ, ನಾನು ನಿರ್ಮಾಪಕನಾಗಿ ಸಿನಿಮಾ ಮಾಡೋಣಾ ಅಂತಿದ್ದೀನಿ
ಶ್ರೀಗಳ ಜೊತೆಗೆ ಮಾತನಾಡ್ತೀನಿ. ಸಲಹೆ ಪಡೆದು ಮುಂದಿನ ನಿರ್ಧಾರ ಮಾಡ್ತೇನೆ. ಶ್ರೀಗಳನ್ನು ಭೇಟಿ ಮಾಡ್ತೀನಿ, ಅಲ್ಲಿಯ ತನಕ ಚಿತ್ರದ ಹೆಚ್ಚೇನು ಮಾತನಾಡುವುದಿಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...