Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸಿ : ದಿನೇಶ್ ಪೂಜಾರಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 26 : ಜೀವ ಜಲ ಅಮೂಲ್ಯವಾದ ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸುವಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ನಗರ ಸಿ. ವಲಯದ ಕಾಮನಬಾವಿ ಬಡಾವಣೆ ಕಾರ್ಯಕ್ಷೇತ್ರದಲ್ಲಿ ವಿಶ್ವಜಲದಿನ ಉದ್ಗಾಟಿಸಿ ಮಾತನಾಡಿದರು.

ಸಕಲ ಜೀವರಾಶಿಗಳಿಗೂ ನೀರು ಬೇಕು. ಮಾನವನಿಗೆ ಕುಡಿಯಲು ಹಾಗೂ ದಿನನಿತ್ಯದ ಬಳಕೆಗೆ ನೀರು ಬೇಕೆ ಬೇಕು. ಮಳೆ ನೀರನ್ನು ಹರಿದು ಹೋಗಲು ಬಿಡದೆ ಭೂಮಿಯಲ್ಲಿ ಇಂಗಿಸುವ ಕೆಲಸವಾದಾಗ ಅಂತರ್ಜಲ ಮಟ್ಟ ಹೆಚ್ಚಲಿದೆ. ರಾಜ್ಯಾದ್ಯಂತ ನಾಲ್ಕು ನೂರು ಶುದ್ದ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. 714 ಕೆರೆಗಳ ಹೂಳೆತ್ತಲಾಗಿದೆ. ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಏಳು ಲಕ್ಷ ಸಸಿಗಳನ್ನು ನಾಟಿ ಮಾಡಲಾಗಿದೆ. ಗಿಡ-ಮರಗಳನ್ನು ಕಡಿದು ಪರಿಸರವನ್ನು ನಾಶಪಡಿಸುವುದರಿಂದ ಸಕಾಲಕ್ಕೆ ಮಳೆಯಾಗುವುದಿಲ್ಲ. ಹಾಗಾಗಿ ಪ್ರತಿಯೊಬ್ಬರು ಪರಿಸರವನ್ನು ಕಾಪಾಡಬೇಕಾಗಿದೆ ಎಂದು ತಿಳಿಸಿದರು.

ಈಗಿನಿಂದಲೇ ನೀರನ್ನು ಉಳಿತಾಯ ಮಾಡಿದರೆ ಮುಂದಿನ ಪೀಳಿಗೆಗೆ ಜಲವನ್ನು ಸಂರಕ್ಷಿಸಬಹುದು. ನಲ್ಲಿ ಮತ್ತು ಪೈಪ್‍ಗಳಲ್ಲಿ ನೀರು ಸೋರಿಕೆಯಾಗುತ್ತಿರುತ್ತದೆ. ಮನೆಯಲ್ಲಿ ಬಳಕೆಯಾಗುವ ನೀರನ್ನು ಚರಂಡಿಗೆ ಬಿಡದೆ ಗಿಡ ಮರಗಳಿಗೆ ಸೇರುವಂತೆ ಹಿಂಗುಗುಂಡಿ ಮಾಡಿಕೊಳ್ಳಬೇಕು. ಮಳೆ ನೀರು, ಹನಿ ನೀರಾವರಿ ಪದ್ದತಿಯನ್ನು ಅಳವಡಿಸಿಕೊಳ್ಳುವುದು ಒಳ್ಳೆಯದು ಎಂದರು.

ಜನಜಾಗೃತಿ ವೇದಿಕೆ ಸದಸ್ಯೆ ಶ್ರೀಮತಿ ರೂಪ ಜನಾರ್ಧನ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಸುಧಾ ಇನ್ನು ಅನೇಕು ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...