Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸಿ : ದಿನೇಶ್ ಪೂಜಾರಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 26 : ಜೀವ ಜಲ ಅಮೂಲ್ಯವಾದ ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸುವಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ನಗರ ಸಿ. ವಲಯದ ಕಾಮನಬಾವಿ ಬಡಾವಣೆ ಕಾರ್ಯಕ್ಷೇತ್ರದಲ್ಲಿ ವಿಶ್ವಜಲದಿನ ಉದ್ಗಾಟಿಸಿ ಮಾತನಾಡಿದರು.

ಸಕಲ ಜೀವರಾಶಿಗಳಿಗೂ ನೀರು ಬೇಕು. ಮಾನವನಿಗೆ ಕುಡಿಯಲು ಹಾಗೂ ದಿನನಿತ್ಯದ ಬಳಕೆಗೆ ನೀರು ಬೇಕೆ ಬೇಕು. ಮಳೆ ನೀರನ್ನು ಹರಿದು ಹೋಗಲು ಬಿಡದೆ ಭೂಮಿಯಲ್ಲಿ ಇಂಗಿಸುವ ಕೆಲಸವಾದಾಗ ಅಂತರ್ಜಲ ಮಟ್ಟ ಹೆಚ್ಚಲಿದೆ. ರಾಜ್ಯಾದ್ಯಂತ ನಾಲ್ಕು ನೂರು ಶುದ್ದ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. 714 ಕೆರೆಗಳ ಹೂಳೆತ್ತಲಾಗಿದೆ. ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಏಳು ಲಕ್ಷ ಸಸಿಗಳನ್ನು ನಾಟಿ ಮಾಡಲಾಗಿದೆ. ಗಿಡ-ಮರಗಳನ್ನು ಕಡಿದು ಪರಿಸರವನ್ನು ನಾಶಪಡಿಸುವುದರಿಂದ ಸಕಾಲಕ್ಕೆ ಮಳೆಯಾಗುವುದಿಲ್ಲ. ಹಾಗಾಗಿ ಪ್ರತಿಯೊಬ್ಬರು ಪರಿಸರವನ್ನು ಕಾಪಾಡಬೇಕಾಗಿದೆ ಎಂದು ತಿಳಿಸಿದರು.

ಈಗಿನಿಂದಲೇ ನೀರನ್ನು ಉಳಿತಾಯ ಮಾಡಿದರೆ ಮುಂದಿನ ಪೀಳಿಗೆಗೆ ಜಲವನ್ನು ಸಂರಕ್ಷಿಸಬಹುದು. ನಲ್ಲಿ ಮತ್ತು ಪೈಪ್‍ಗಳಲ್ಲಿ ನೀರು ಸೋರಿಕೆಯಾಗುತ್ತಿರುತ್ತದೆ. ಮನೆಯಲ್ಲಿ ಬಳಕೆಯಾಗುವ ನೀರನ್ನು ಚರಂಡಿಗೆ ಬಿಡದೆ ಗಿಡ ಮರಗಳಿಗೆ ಸೇರುವಂತೆ ಹಿಂಗುಗುಂಡಿ ಮಾಡಿಕೊಳ್ಳಬೇಕು. ಮಳೆ ನೀರು, ಹನಿ ನೀರಾವರಿ ಪದ್ದತಿಯನ್ನು ಅಳವಡಿಸಿಕೊಳ್ಳುವುದು ಒಳ್ಳೆಯದು ಎಂದರು.

ಜನಜಾಗೃತಿ ವೇದಿಕೆ ಸದಸ್ಯೆ ಶ್ರೀಮತಿ ರೂಪ ಜನಾರ್ಧನ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಸುಧಾ ಇನ್ನು ಅನೇಕು ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ : ಕೇಳಿದ್ದು ಎಷ್ಟು ಕೋಟಿ, ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ..?

ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 3,454 ಕೋಟಿ ಹಣ ಬಿಡುಗಡೆ

error: Content is protected !!