Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರೈತರಿಗೆ ಉಪಯುಕ್ತ ಮಾಹಿತಿ |  ರೈತ ಉತ್ಪಾದಕ ಸಂಸ್ಥೆಗಳಿಗೆ ಶೇ.4 ರಷ್ಟು ಬಡ್ಡಿ ಸಹಾಯಧನ: ಡಿ.30 ಅರ್ಜಿ ಸಲ್ಲಿಸಲು ಕಡೆಯ ದಿನ

---Advertisement---

ಚಿತ್ರದುರ್ಗ. ಡಿ.21: ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳಲ್ಲಿ ರೈತ ಉತ್ಪಾದಕ ಸಂಸ್ಥೆ (ಎಫ್.ಪಿ.ಒ)ಗಳು ಪಡೆದ ರೂ.20 ಲಕ್ಷದವರೆಗಿನ ಸಾಲಕ್ಕೆ ಶೇ.4 ರಷ್ಟು ಬಡ್ಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಲು ಮಾರುಕಟ್ಟೆ ಸಂಪರ್ಕ, ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ/ಮೌಲ್ಯವರ್ಧನೆ ಮತ್ತು ವಿವಿಧ ತಂತ್ರಜ್ಞಾನಗಳನ್ನು ಅಡಳವಡಿಕೆ, ನಷ್ಟ ಕಡಿಮೆಗೊಳಿಸಿ ಆದಾಯ ವೃದ್ಧಿಗೊಳಿಸಲು, ಮೌಲ್ಯ ಸರಪಳಿ ಪ್ರೇರೇಪಿಸುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಮಗ್ರ ಸುಧಾರಣೆಗಾಗಿ ಯೋಜನೆಯನ್ನು ಜಾರಿ ಮಾಡಲಾಗಿದೆ. ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ರೇಷ್ಮೆ ಹಾಗೂ ಕೈಮಗ್ಗ ಮತ್ತು ಜವಳಿ ಉತ್ಪನ್ನಗಳನ್ನು ಸಂಸ್ಕರಣೆ, ಮೌಲ್ಯವರ್ಧಿತ ಸಂಸ್ಕರಣೆಯಲ್ಲಿ ತೊಡಗಿರುವ ರೈತ ಉತ್ಪಾದಕ ಸಂಸ್ಥೆಗಳು ಡಿ.30 ರ ಸಂಜೆ 4 ಗಂಟೆ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ, ತಾಲ್ಲೂಕ ಮಟ್ಟದ ಕೃಷಿ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...