Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರಿಗೆ ಉಪಯುಕ್ತ ಮಾಹಿತಿ | ಏರುಮಡಿ ಪದ್ದತಿಯಲ್ಲಿ ಶೇಂಗಾ ಬೆಳೆ: ಟ್ರ್ಯಾಕ್ಟರ್ ಚಾಲಿತ ಉಪಕರಣದಿಂದ ಪ್ರಾತ್ಯಕ್ಷಿಕೆ

Facebook
Twitter
Telegram
WhatsApp

ಚಿತ್ರದುರ್ಗ. ಫೆ.09 : ಹಿರಿಯೂರಿನ ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಜಿಲ್ಲೆಯ ರೈತರಿಗೆ “ಶೇಂಗಾ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ತಂತ್ರಜ್ಞಾನಗಳು ಕುರಿತು ಒಂದು ದಿನದ ತರಬೇತಿ ತರಬೇತಿ ಕಾರ್ಯಕ್ರ ನಡೆಯಿತು.

ಅಖಿಲ ಭಾರತ ಸಮನ್ವಯ ಶೇಂಗಾ ಸಂಶೋಧನಾ ಪ್ರಾಯೋಜನೆ, ಬಬ್ಬೂರು ಫಾರಂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧಾ ಕೇಂದ್ರ ಸಹಭಾಗಿತ್ವದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರುಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಏರುಮಡಿ ಪದ್ದತಿಯಲ್ಲಿ ಶೇಂಗಾ ಬೆಳೆಯಲು ಏರು ಮಡಿ ನಿರ್ಮಿಸುವ ಟ್ರ್ಯಾಕ್ಟರ್ ಚಾಲಿತ ಉಪಕರಣದಿಂದ ಪ್ರಾತ್ಯಕ್ಷಿಕೆ ನೀಡಲಾಯಿತು.

ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ 70ಕ್ಕೂ ಹೆಚ್ಚು ಆಸಕ್ತ ರೈತ ಮತ್ತು ರೈತ ಮಹಿಳೆಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸೂಕ್ತವಾದ ಮಾಹಿತಿ ಪಡೆದುಕೊಂಡರು.


ಬಬ್ಬೂರು ಫಾರಂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಸುರೇಶ ಡಿ.ಏಕಬೋಟೆ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿಯಲ್ಲಿ ಕೂಲಿಯಾಳುಗಳ ಸಮಸ್ಯೆ ನಿವಾರಿಸಲು ಕೃಷಿ ಯಾಂತ್ರೀಕರಣ ಅನಿವಾರ್ಯವಾಗಿದೆ, ಶೇಂಗಾ ಬೆಳೆಯಲ್ಲಿ ರಸಗೊಬ್ಬರಗಳ ಬಳಕೆ ಕಡಿಮೆ ಮಾಡಲು ಜೈವಿಕ ಗೊಬ್ಬರವಾದ ರೈಜೋಬಿಯಂ ಮತ್ತು ಬೇರು ಮತ್ತು ಕಾಂಡ ಕೊಳೆ ರೋಗದ ಸಮಸ್ಯೆಕಡಿಮೆ ಮಾಡಲು ಜೈವಿಕ ಪೀಡೆ ನಾಶಕವಾದ ಟ್ರೈಕೋಡರ್ಮಾದಿಂದ ಬೀಜೋಪಚಾರ ಪ್ರಮುಖ ಪಾತ್ರವಹಿಸಿದೆ. ಈ ನಿಟ್ಟಿನಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಿಂದ ಹೊರತಂದಿರುವ ಸಂಶೋಧನಾ ತಾಂತ್ರಿಕತೆಗಳನ್ನು ರೈತರು ಅನುಸರಿಸುವ ನಿಟ್ಟಿನಲ್ಲಿ ನಮ್ಮ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನಕೇಂದ್ರ, ಬಬ್ಬೂರು ಫಾರಂ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ, ಹಿರಿಯೂರು ಸದಾ ಸಿದ್ಧವೆಂದು ಭರವಸೆ ನೀಡಿದರು.


ಶೇಂಗಾತಳಿ ವಿಜ್ಞಾನಿ ಡಾ.ಬಿ. ಎನ್. ಹರೀಶ್ ಬಾಬು ಮಾತನಾಡಿ, ಕರ್ನಾಟಕ ರಾಜ್ಯದ ಮಧ್ಯ ಒಣವಲಯ ಪ್ರದೇಶಕ್ಕೆ ಸೂಕ್ತವಾದಂತಹ ಶೇಂಗಾ ತಳಿಗಳು ಮತ್ತು ರೈತರು ಅನುಸರಿಸಬೇಕಾದ ಸುಧಾರಿತ ಬೇಸಾಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ, ಇತ್ತೀಚಿಗೆ ಬಿಡುಗಡೆ ಮಾಡಲಾದ ಸುಧಾರಿತ ತಳಿಯಾದ ಡಿ.ಹೆಚ್256 ರೈತರು ಹೆಚ್ಚಾಗಿ ಬೆಳೆಯಬೇಕೆಂದು ಮನವಿ ಮಾಡಿದರು. ಈ ನಿಟ್ಟಿನಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧಾ ಕೇಂದ್ರದಲ್ಲಿ ಪ್ರಸ್ತುತ ಡಿ.ಹೆಚ್256 ಶೇಂಗಾ ತಳಿಯ ಬೀಜಗಳು ಲಭ್ಯವಿದ್ದು, ಆಸಕ್ತ ರೈತರು ಸಂಶೋಧನಾ ಕೇಂದ್ರದಿಂದ ಖರೀದಿಸಬಹುದೆಂದು ತಿಳಿಸಿದರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಮಾತನಾಡಿ, ಶೇಂಗಾ ಜಿಲ್ಲೆಯ ಪ್ರಮುಖ ಎಣ್ಣೇಕಾಳು ಬೆಳೆಯಾಗಿದ್ದು, ಬೀಜೋಪಚಾರ, ಪೋಷಕಾಂಶಗಳ ನಿರ್ವಹಣೆ, ಸೂಕ್ತ ಸಮಯದಲ್ಲಿ ಕೀಟ ರೋಗಗಳ ನಿರ್ವಹಣೆ ಮತ್ತು ನೀರಾವರಿ ಸೌಲಭ್ಯವುಳ್ಳವರು ಏರುಮಡಿ ಪದ್ದತಿಯನ್ನು ಅನುಸರಿಸಿ ಶೇಂಗಾ ಬೆಳೆಯಲ್ಲಿ ಉತ್ತಮ ಇಳುವರಿ ಪಡೆಯಲು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದರು.

ತಾಂತ್ರಿಕ ಅಧಿಕಾರಿ (ಕೀಟಶಾಸ್ತ್ರ) ವಿಜಯ ಎಸ್.ಧಾನರಡ್ಡಿ ಅವರು ಶೇಂಗಾ ಬೆಳೆಗೆ ಬಾಧಿಸುವ ಪ್ರಮುಖಕೀಟ ಮತ್ತು ರೋಗಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕೃಷಿ ಇಂಜಿನಿಯರ್ ಡಾ.ರಾಜಶೇಖರ್ ಡಿ. ಬಾರ್ಕರ್ ಅವರು ಶೇಂಗಾ ಬೆಳೆ ಬಿತ್ತನೆಯಿಂದ ಕೊಯ್ಲು ಮತ್ತು ಕೊಯ್ಲೋತ್ತರ ಚಟುವಟಿಗಳಿಗೆ ಸೂಕ್ತವಾದಂತಹ ಯಂತ್ರೋಪಕರಣಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.

ತಳಕು ಹೋಬಳಿಯ ಪ್ರಗತಿಪರ ರೈತ ಗುಡಿಹಳ್ಳಿ ಬಡಗಿರಂಗಪ್ಪ ಅವರು ಸುಧಾರಿತ ತಾಂತ್ರಿಕತೆ ಅಳವಡಿಸಿಕೊಂಡು ಡಿ.ಹೆಚ್256 ಮತ್ತು ಕದರಿ ಲೇಪಾಕ್ಷಿ ಶೇಂಗಾತಳಿಯಿಂದ ಉತ್ತಮ ಇಳುವರಿ ಪಡೆದ ಹಾಗೂ ಬಿಳಿರಾಗಿ ಬೆಳೆದ ಅನುಭವ ಹಂಚಿಕೊಂಡರು. ಅದೇರೀತಿ ತಳಕು ಹೋಬಳಿಯ ಮತ್ತೋರ್ವ ಪ್ರಗತಿ ಪರರೈತ ಶರಣಪ್ಪ ಅವರು ಹಾಲಿ ನೀರಾವರಿಯಲ್ಲಿ ಏರು ಮಡಿ ಪದ್ದತಿಯಲ್ಲಿ ಡಿ.ಹೆಚ್256 ಉತ್ತಮವಾಗಿ ಬೆಳೆದಿದ್ದು, ಎಕರೆಗೆ 10-12 ಕ್ವಿಂಟಲ್ ಇಳುವರಿ ನಿರೀಕ್ಷಿಸಬಹುದು ಎಂದು ತಮ್ಮ ಅನುಭವ ಹಂಚಿಕೊಂಡರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!