ರೈತರಿಗೆ ಉಪಯುಕ್ತ ಮಾಹಿತಿ : ಕಡಲೆ ರೋಗದ ಹತೋಟಿಗೆ ಕೃಷಿ ಇಲಾಖೆ ಸಲಹೆ

suddionenews
1 Min Read

ಚಿತ್ರದುರ್ಗ, (ಜನವರಿ.06) : ಜಿಲ್ಲೆಯಲ್ಲಿ ಪ್ರಸ್ತುತ ಕಡಲೆ ಬೆಳೆ ಹೂವಾಡುವ ಹಂತದಲ್ಲಿದೆ. ಈಚೆಗೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಯ-ರೈತ ಸಂಜೀವಿನಿ ವಾಹನ ಹಿರಿಯೂರು ತಾಲ್ಲೂಕು ಹೂವಿನಹೊಳೆ ಗ್ರಾಮಕ್ಕೆ ಭೇಟಿ ನೀಡಿ ಕಡಲೆ ಬೆಳೆಯನ್ನು ಪರೀಕ್ಷಿಸಿದೆ.

ಈ ಸಂದರ್ಭದಲ್ಲಿ ಕಡಲೆ ಬೆಳೆಗೆ ಅಸ್ಕೋ ಕೈಟಾ ಅಂಗಮಾರಿ ರೋಗ ಕಂಡುಬಂದಿರುತ್ತದೆ. ಇದೇ ತರಹದ ಸುತ್ತಮುತ್ತ ಪ್ರದೇಶದಲ್ಲಿ ಹಾಗೂ ಕಡಲೆ ಬೆಳೆದಂತಹ ಹಿರಿಯೂರು, ಚಿತ್ರದುರ್ಗ ಮತ್ತು ಚಳ್ಳಕೆರೆ ಭಾಗದಲ್ಲಿ ಕೂಡ ಕಂಡು ಬರುವ ಸಾಧ್ಯತೆ ಇದೆ.

ಹಾಗಾಗಿ ಈ ರೋಗದ ಹತೋಟಿಗಾಗಿ ಮ್ಯಾಕೋಜೆಬ್ 2 ಗ್ರಾಂ ಪ್ರತಿ ಲೀಟರ್‍ಗೆ ಅಥವಾ ವೆಟಬಲ್ ಸಲ್ಪೇರ್ 2-3 ಗ್ರಾಂ ಪ್ರತೀ ಲೀಟರ್‍ಗೆ ಅಥವಾ ಕಾರ್ಬನ್‍ಡೈಜಿಯಂ 2 ಗ್ರಾಂ ಪ್ರತೀ ಲೀಟರ್‍ಗೆ ಬೆರಸಿ ಸಿಂಪಡಿಸುವಂತೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕರು ರೈತರಿಗೆ ಸಲಹೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *