Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರಿಗೆ ಉಪಯುಕ್ತ ಮಾಹಿತಿ : ಸೂರ್ಯಕಾಂತಿ ಬೆಳೆಯಲ್ಲಿ ಸುಧಾರಿತ ಬೇಸಾಯ ಪದ್ದತಿ

Facebook
Twitter
Telegram
WhatsApp

ಚಿತ್ರದುರ್ಗ, (ಜೂನ್ 18) :  ಸೂರ್ಯಕಾಂತಿ ರಾಜ್ಯದ ಪ್ರಮುಖ ಎಣ್ಣೆಕಾಳು ಬೆಳೆಯಾಗಿದೆ. ವರ್ಷದ ಮೂರು ಅಂಗಾಮುಗಳಲ್ಲಿ ಬೆಳೆಯಬಹುದಾದ ಬೆಳೆಯಾಗಿದೆ. ಈ ಬೆಳೆಯನ್ನು ಮುಖ್ಯವಾಗಿ ಶುಷ್ಕ ವಾತಾವರಣ ಮತ್ತು ಹವಾಮಾನ ವೈಪರಿತ್ಯಗಳನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿದೆ.

ಸೂರ್ಯಕಾಂತಿ ಬೀಜವು ಉತ್ತಮ ದರ್ಜೆಯ ಮತ್ತು ಪುಷ್ಠಿದಾಯಕವಾದ ಆಹಾರದಲ್ಲಿ ಬಳಸಬಹುದಾದ ಸುಮಾರು ಶೇ.40ರಷ್ಟು ಎಣ್ಣೆ ಅಂಶ ಹೊಂದಿದೆ.

ಸೂರ್ಯಕಾಂತಿ ತಳಿಗಳು ಮತ್ತು ವಿಶೇಷ ಗುಣಗಳು: ಕೆ.ಬಿ.ಎಸ್.ಹೆಚ್-41 ತಳಿಯನ್ನು ಮುಂಗಾರು, ಹಿಂಗಾರು ಮತ್ತು ಬೇಸಿಗೆಯ ಸಮಯದಲ್ಲಿ ಬಿತ್ತನೆ ಮಾಡಬಹುದು ಸುಮಾರು  90 ರಿಂದ 92 ದಿನಗಳ ಅವಧಿಯಲ್ಲಿ ಫಸಲಿಗೆ ಬರುತ್ತದೆ. ಎಕರೆಗೆ ಸುಮಾರು 4 ರಿಂದ 5 ಕ್ವಿಂಟಲ್ ಖುಷ್ಕಿ ಜಮೀನು, 8 ರಿಂದ 10 ಕ್ವಿಂಟಲ್ ನೀರಾವರಿ ಜಮೀನುಗಳಲ್ಲಿ ಇಳುವರಿ ಕೊಡುತ್ತದೆ. ತೇವಾಂಶ ಒತ್ತಡಕ್ಕೆ ಹೊಂದಿಕೊಳ್ಳುವಂತಹ ತಳಿಯಾಗಿದೆ.

ಕೆ.ಬಿ.ಎಸ್.ಹೆಚ್-42 , ಕೆ.ಬಿ.ಎಸ್.ಹೆಚ್-43 ತಳಿಯನ್ನು ಮುಂಗಾರು, ಹಿಂಗಾರು ಮತ್ತು ಬೇಸಿಗೆಯ ಸಮಯದಲ್ಲಿ ಬಿತ್ತನೆ ಮಾಡಬಹುದು ಸುಮಾರು  90 ರಿಂದ 92 ದಿನಗಳ ಅವಧಿಯಲ್ಲಿ ಫಸಲಿಗೆ ಬರುತ್ತದೆ. ಎಕರೆಗೆ ಸುಮಾರು 4 ರಿಂದ 5 ಕ್ವಿಂಟಲ್ ಖುಷ್ಕಿ ಜಮೀನು, 8 ರಿಂದ 10 ಕ್ವಿಂಟಲ್ ನೀರಾವರಿ ಜಮೀನುಗಳಲ್ಲಿ ಇಳುವರಿ ಕೊಡುತ್ತದೆ. ತೇವಾಂಶ ಒತ್ತಡಕ್ಕೆ ಹೊಂದಿಕೊಳ್ಳುವಂತಹ ತಳಿಯಾಗಿದೆ.

ಕೆ.ಬಿ.ಎಸ್.ಹೆಚ್-44, ತಳಿಯನ್ನು ಮುಂಗಾರು, ಹಿಂಗಾರು ಮತ್ತು ಬೇಸಿಗೆಯ ಸಮಯದಲ್ಲಿ ಬಿತ್ತನೆ ಮಾಡಬಹುದು ಸುಮಾರು  95 ರಿಂದ 100 ದಿನಗಳ ಅವಧಿಯಲ್ಲಿ ಫಸಲಿಗೆ ಬರುತ್ತದೆ. ಎಕರೆಗೆ ಸುಮಾರು 4 ರಿಂದ 5 ಕ್ವಿಂಟಲ್ ಖುಷ್ಕಿ ಜಮೀನು, 8 ರಿಂದ 10 ಕ್ವಿಂಟಲ್ ನೀರಾವರಿ ಜಮೀನುಗಳಲ್ಲಿ ಇಳುವರಿ ಕೊಡುತ್ತದೆ. ತುಕ್ಕು ರೋಗ ನಿರೋಧಕ ತಳಿಯಾಗಿದೆ.

ಕೆ.ಬಿ.ಎಸ್.ಹೆಚ್-53, ತಳಿಯನ್ನು ಮುಂಗಾರು, ಹಿಂಗಾರು ಮತ್ತು ಬೇಸಿಗೆಯ ಸಮಯದಲ್ಲಿ ಬಿತ್ತನೆ ಮಾಡಬಹುದು ಸುಮಾರು  95 ರಿಂದ 100 ದಿನಗಳ ಅವಧಿಯಲ್ಲಿ ಫಸಲಿಗೆ ಬರುತ್ತದೆ. ಎಕರೆಗೆ ಸುಮಾರು 4 ರಿಂದ 5 ಕ್ವಿಂಟಲ್ ಖುಷ್ಕಿ ಜಮೀನು, 8 ರಿಂದ 10 ಕ್ವಿಂಟಲ್ ನೀರಾವರಿ ಜಮೀನುಗಳಲ್ಲಿ ಇಳುವರಿ ಕೊಡುತ್ತದೆ.

ಬೂದು ರೋಗ ನಿರೋಧಕ ತಳಿಯಾಗಿದೆ.
ಕೆ.ಬಿ.ಎಸ್.ಹೆಚ್-78, ತಳಿಯನ್ನು ಮುಂಗಾರು, ಹಿಂಗಾರು ಮತ್ತು ಬೇಸಿಗೆಯ ಸಮಯದಲ್ಲಿ ಬಿತ್ತನೆ ಮಾಡಬಹುದು ಸುಮಾರು  83 ರಿಂದ 85 ದಿನಗಳ ಅವಧಿಯಲ್ಲಿ ಫಸಲಿಗೆ ಬರುತ್ತದೆ. ಎಕರೆಗೆ ಸುಮಾರು 8 ರಿಂದ 10 ಕ್ವಿಂಟಲ್ ಖುಷ್ಕಿ ಜಮೀನು, 10 ರಿಂದ 12 ಕ್ವಿಂಟಲ್ ನೀರಾವರಿ ಜಮೀನುಗಳಲ್ಲಿ ಇಳುವರಿ ಕೊಡುತ್ತದೆ. ಅಲ್ಪಾವಧಿ ತಳಿಯಾಗಿದೆ.

ಬಿತ್ತನೆ  ಮಾಡುವುದಕ್ಕಿಂತ ಮುಂಚೆ ರೈತರು ಅನುಸರಿಸಬೇಕಾದ ಕ್ರಮಗಳು: ರೈತರು ಭೂಮಿಯನ್ನು ಚೆನ್ನಾಗಿ ಅದ ಮಾಡಿದನಂತರ ಪೂರ್ಣ ಪ್ರಮಾಣದ ಕೊಟ್ಟಿಗೆ ಗೊಬ್ಬರ ರಾಸಾಯನಿಕ ಗೊಬ್ಬರಗಳನ್ನು ಬಿತ್ತನೆ ಮಾಡುವುದಕ್ಕಿಂತ ಎರಡರಿಂದ ಮೂರು ವಾರಗಳ ಮೊದಲು ಮಣ್ಣಿನಲ್ಲಿ ಬೆರೆಸಬೇಕು.
ಬಿತ್ತನೆಗೆ ಮುಂಚೆ ಸೂರ್ಯಕಾಂತಿ ಬೀಜವನ್ನು ಅಜಟೋಬ್ಯಾಕ್ಟರ್ ಜೈವಿಕ ಗೊಬ್ಬರವನ್ನು ಬೆರೆಸಿ ಅರ್ಧ ಗಂಟೆ ನೆರಳಿನಲ್ಲಿ ಒಣಗಿಸಿ 2 ಗ್ರಾಂ ಥೈರಾಮ್ ಪುಡಿ ಹಾಗೂ ಮ್ಯಾಂಕೊಜೆಬ್ ಬಳಸಿ ಬಿತ್ತಲು ಉಪಯೋಗಿಸಬೇಕೇಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Apple – Diabetes: ಮಧುಮೇಹ ರೋಗಿಗಳು ಸೇಬು ತಿಂದರೆ ಏನಾಗುತ್ತೆ ಗೊತ್ತಾ..?

ಸುದ್ದಿಒನ್ : ದಿನವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯ ಬರುವುದಿಲ್ಲ ಎನ್ನುತ್ತಾರೆ. ಆದಾಗ್ಯೂ, ಸೇಬು ತಿನ್ನುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ವೈದ್ಯರ ಸಲಹೆಯಂತೆ ಮಧುಮೇಹ ಇರುವವರಿಗೂ ಸೇಬು ತುಂಬಾ ಒಳ್ಳೆಯದು. ಏಕೆಂದರೆ

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ,

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ, ಗುರುವಾರ ರಾಶಿ ಭವಿಷ್ಯ -ಏಪ್ರಿಲ್-18,2024 ಸೂರ್ಯೋದಯ: 06:01, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ, ಉತ್ತರಾಯಣಂ,ತಿಥಿ: ದಸಮಿ, ನಕ್ಷತ್ರ:

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

error: Content is protected !!