ರೈತರಿಗೆ ಉಪಯುಕ್ತ ಮಾಹಿತಿ : ಸೂರ್ಯಕಾಂತಿ ಬೆಳೆಯಲ್ಲಿ ಸುಧಾರಿತ ಬೇಸಾಯ ಪದ್ದತಿ

ಚಿತ್ರದುರ್ಗ, (ಜೂನ್ 18) :  ಸೂರ್ಯಕಾಂತಿ ರಾಜ್ಯದ ಪ್ರಮುಖ ಎಣ್ಣೆಕಾಳು ಬೆಳೆಯಾಗಿದೆ. ವರ್ಷದ ಮೂರು ಅಂಗಾಮುಗಳಲ್ಲಿ ಬೆಳೆಯಬಹುದಾದ ಬೆಳೆಯಾಗಿದೆ. ಈ ಬೆಳೆಯನ್ನು ಮುಖ್ಯವಾಗಿ ಶುಷ್ಕ ವಾತಾವರಣ ಮತ್ತು ಹವಾಮಾನ ವೈಪರಿತ್ಯಗಳನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿದೆ.

ಸೂರ್ಯಕಾಂತಿ ಬೀಜವು ಉತ್ತಮ ದರ್ಜೆಯ ಮತ್ತು ಪುಷ್ಠಿದಾಯಕವಾದ ಆಹಾರದಲ್ಲಿ ಬಳಸಬಹುದಾದ ಸುಮಾರು ಶೇ.40ರಷ್ಟು ಎಣ್ಣೆ ಅಂಶ ಹೊಂದಿದೆ.

ಸೂರ್ಯಕಾಂತಿ ತಳಿಗಳು ಮತ್ತು ವಿಶೇಷ ಗುಣಗಳು: ಕೆ.ಬಿ.ಎಸ್.ಹೆಚ್-41 ತಳಿಯನ್ನು ಮುಂಗಾರು, ಹಿಂಗಾರು ಮತ್ತು ಬೇಸಿಗೆಯ ಸಮಯದಲ್ಲಿ ಬಿತ್ತನೆ ಮಾಡಬಹುದು ಸುಮಾರು  90 ರಿಂದ 92 ದಿನಗಳ ಅವಧಿಯಲ್ಲಿ ಫಸಲಿಗೆ ಬರುತ್ತದೆ. ಎಕರೆಗೆ ಸುಮಾರು 4 ರಿಂದ 5 ಕ್ವಿಂಟಲ್ ಖುಷ್ಕಿ ಜಮೀನು, 8 ರಿಂದ 10 ಕ್ವಿಂಟಲ್ ನೀರಾವರಿ ಜಮೀನುಗಳಲ್ಲಿ ಇಳುವರಿ ಕೊಡುತ್ತದೆ. ತೇವಾಂಶ ಒತ್ತಡಕ್ಕೆ ಹೊಂದಿಕೊಳ್ಳುವಂತಹ ತಳಿಯಾಗಿದೆ.

ಕೆ.ಬಿ.ಎಸ್.ಹೆಚ್-42 , ಕೆ.ಬಿ.ಎಸ್.ಹೆಚ್-43 ತಳಿಯನ್ನು ಮುಂಗಾರು, ಹಿಂಗಾರು ಮತ್ತು ಬೇಸಿಗೆಯ ಸಮಯದಲ್ಲಿ ಬಿತ್ತನೆ ಮಾಡಬಹುದು ಸುಮಾರು  90 ರಿಂದ 92 ದಿನಗಳ ಅವಧಿಯಲ್ಲಿ ಫಸಲಿಗೆ ಬರುತ್ತದೆ. ಎಕರೆಗೆ ಸುಮಾರು 4 ರಿಂದ 5 ಕ್ವಿಂಟಲ್ ಖುಷ್ಕಿ ಜಮೀನು, 8 ರಿಂದ 10 ಕ್ವಿಂಟಲ್ ನೀರಾವರಿ ಜಮೀನುಗಳಲ್ಲಿ ಇಳುವರಿ ಕೊಡುತ್ತದೆ. ತೇವಾಂಶ ಒತ್ತಡಕ್ಕೆ ಹೊಂದಿಕೊಳ್ಳುವಂತಹ ತಳಿಯಾಗಿದೆ.

ಕೆ.ಬಿ.ಎಸ್.ಹೆಚ್-44, ತಳಿಯನ್ನು ಮುಂಗಾರು, ಹಿಂಗಾರು ಮತ್ತು ಬೇಸಿಗೆಯ ಸಮಯದಲ್ಲಿ ಬಿತ್ತನೆ ಮಾಡಬಹುದು ಸುಮಾರು  95 ರಿಂದ 100 ದಿನಗಳ ಅವಧಿಯಲ್ಲಿ ಫಸಲಿಗೆ ಬರುತ್ತದೆ. ಎಕರೆಗೆ ಸುಮಾರು 4 ರಿಂದ 5 ಕ್ವಿಂಟಲ್ ಖುಷ್ಕಿ ಜಮೀನು, 8 ರಿಂದ 10 ಕ್ವಿಂಟಲ್ ನೀರಾವರಿ ಜಮೀನುಗಳಲ್ಲಿ ಇಳುವರಿ ಕೊಡುತ್ತದೆ. ತುಕ್ಕು ರೋಗ ನಿರೋಧಕ ತಳಿಯಾಗಿದೆ.

ಕೆ.ಬಿ.ಎಸ್.ಹೆಚ್-53, ತಳಿಯನ್ನು ಮುಂಗಾರು, ಹಿಂಗಾರು ಮತ್ತು ಬೇಸಿಗೆಯ ಸಮಯದಲ್ಲಿ ಬಿತ್ತನೆ ಮಾಡಬಹುದು ಸುಮಾರು  95 ರಿಂದ 100 ದಿನಗಳ ಅವಧಿಯಲ್ಲಿ ಫಸಲಿಗೆ ಬರುತ್ತದೆ. ಎಕರೆಗೆ ಸುಮಾರು 4 ರಿಂದ 5 ಕ್ವಿಂಟಲ್ ಖುಷ್ಕಿ ಜಮೀನು, 8 ರಿಂದ 10 ಕ್ವಿಂಟಲ್ ನೀರಾವರಿ ಜಮೀನುಗಳಲ್ಲಿ ಇಳುವರಿ ಕೊಡುತ್ತದೆ.

ಬೂದು ರೋಗ ನಿರೋಧಕ ತಳಿಯಾಗಿದೆ.
ಕೆ.ಬಿ.ಎಸ್.ಹೆಚ್-78, ತಳಿಯನ್ನು ಮುಂಗಾರು, ಹಿಂಗಾರು ಮತ್ತು ಬೇಸಿಗೆಯ ಸಮಯದಲ್ಲಿ ಬಿತ್ತನೆ ಮಾಡಬಹುದು ಸುಮಾರು  83 ರಿಂದ 85 ದಿನಗಳ ಅವಧಿಯಲ್ಲಿ ಫಸಲಿಗೆ ಬರುತ್ತದೆ. ಎಕರೆಗೆ ಸುಮಾರು 8 ರಿಂದ 10 ಕ್ವಿಂಟಲ್ ಖುಷ್ಕಿ ಜಮೀನು, 10 ರಿಂದ 12 ಕ್ವಿಂಟಲ್ ನೀರಾವರಿ ಜಮೀನುಗಳಲ್ಲಿ ಇಳುವರಿ ಕೊಡುತ್ತದೆ. ಅಲ್ಪಾವಧಿ ತಳಿಯಾಗಿದೆ.

ಬಿತ್ತನೆ  ಮಾಡುವುದಕ್ಕಿಂತ ಮುಂಚೆ ರೈತರು ಅನುಸರಿಸಬೇಕಾದ ಕ್ರಮಗಳು: ರೈತರು ಭೂಮಿಯನ್ನು ಚೆನ್ನಾಗಿ ಅದ ಮಾಡಿದನಂತರ ಪೂರ್ಣ ಪ್ರಮಾಣದ ಕೊಟ್ಟಿಗೆ ಗೊಬ್ಬರ ರಾಸಾಯನಿಕ ಗೊಬ್ಬರಗಳನ್ನು ಬಿತ್ತನೆ ಮಾಡುವುದಕ್ಕಿಂತ ಎರಡರಿಂದ ಮೂರು ವಾರಗಳ ಮೊದಲು ಮಣ್ಣಿನಲ್ಲಿ ಬೆರೆಸಬೇಕು.
ಬಿತ್ತನೆಗೆ ಮುಂಚೆ ಸೂರ್ಯಕಾಂತಿ ಬೀಜವನ್ನು ಅಜಟೋಬ್ಯಾಕ್ಟರ್ ಜೈವಿಕ ಗೊಬ್ಬರವನ್ನು ಬೆರೆಸಿ ಅರ್ಧ ಗಂಟೆ ನೆರಳಿನಲ್ಲಿ ಒಣಗಿಸಿ 2 ಗ್ರಾಂ ಥೈರಾಮ್ ಪುಡಿ ಹಾಗೂ ಮ್ಯಾಂಕೊಜೆಬ್ ಬಳಸಿ ಬಿತ್ತಲು ಉಪಯೋಗಿಸಬೇಕೇಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

1 hour ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

2 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

3 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

3 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago