Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಉಪಯುಕ್ತ ಮಾಹಿತಿ | ಬೆಳೆ ಪರಿಹಾರ ಪಾವತಿ ಸಂಬಂಧ ಸಹಾಯವಾಣಿ ಆರಂಭ : ಇಲ್ಲಿದೆ ತಾಲ್ಲೂಕುವಾರು ಮಾಹಿತಿ

---Advertisement---

ಚಿತ್ರದುರ್ಗ. ಮೇ.08:   ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ  ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲೆಯ 1,31,776 ರೈತರಿಗೆ ಮೊದಲನೇ ಕಂತಾಗಿ ಗರಿಷ್ಠ ರೂ.2000 ರವರೆಗೆ ಒಟ್ಟು ರೂ.25,61,56,790/-ಗಳನ್ನು ಪರಿಹಾರವನ್ನು ಈಗಾಗಲೇ ವಿತರಿಸಲಾಗಿದೆ.
ಪ್ರಸ್ತುತ ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಅರ್ಹತೆಯ ಅನುಸಾರ ಅರ್ಹ ರೈತರಿಗೆ ಗರಿಷ್ಠ ರೂ.2000 ರವರೆಗೆ ಪರಿಹಾರ ಮೊತ್ತ ಪಾವತಿಸಿರುವುದನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ (ಇನ್‍ಪುಟ್ ಸಬ್ಸಿಡಿ) ಮೊತ್ತವನ್ನು ವಿತರಿಸಲಾಗುವುದು. ಅದರಂತೆ ಜಿಲ್ಲೆಯ 1,17,064 ರೈತರಿಗೆ ಒಟ್ಟು ರೂ.89,31,60,013/- ಗಳನ್ನು ಡಿಬಿಟಿ ಮುಖಾಂತರ ಪಾವತಿಸಲಾಗುತ್ತಿದೆ.

ಪರಿಹಾರ ಹಣ ಪಾವತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ 08194-222538,

ಉಪ ವಿಭಾಗಾಧಿಕಾರಿಗಳ ಕಚೇರಿ 08194-222413 ಹಾಗೂ ಚಿತ್ರದುರ್ಗ ತಾಲ್ಲೂಕು ಕಚೇರಿ 08194-222416,

ಚಳ್ಳಕೆರೆ 08195-250648,
ಹಿರಿಯೂರು 08193-263226
ಹೊಸದುರ್ಗ 08199-295058,
ಹೊಳಲ್ಕೆರೆ 08191-200013,
ಮೊಳಕಾಲ್ಮೂರು ತಾಲ್ಲೂಕು ಕಚೇರಿ 08198-229234 ಗೆ ಕರೆ ಮಾಡಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment