Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ : ಸಿಟಿ ರವಿ ಅರೆಸ್ಟ್..!

---Advertisement---

ಬೆಳಗಾವಿ: ಇಂದು ಮಧ್ಯಾಹ್ನದಿಂದಾನೂ ಸಿಟಿ ರವಿ ಆಡಿದ್ದಾರೆ ಎನ್ನಲಾದ ಮಾತುಗಳ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಳಸಿರುವ ಅಶ್ಲೀಲ ಪದಕ್ಕೆ ಎಲ್ಲರಿಂದಾನೂ ವಿರೋಧ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಸಿಟಿ ರವಿ ಅರೆಸ್ಟ್ ಆಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಎಂಎಲ್​ಸಿ ಸಿ.ಟಿ ರವಿ ವಿರುದ್ಧ ಬಿಎನ್​ಎಸ್​​​ ಆ್ಯಕ್ಟ್​​​ ಸೆಕ್ಷನ್​​ 75 ಮತ್ತು ಸೆಕ್ಷನ್​​ 79 ಅಡಿಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ಸೆಕ್ಷನ್​​ 75 ಲೈಂಗಿಕ ದೌರ್ಜನ್ಯ ಮತ್ತು ಮಹಿಳೆಗೆ ನಿಂದನೆ ಹಾಗೂ ಸೆಕ್ಷನ್​​ 79 ಕೈ ಸನ್ನೆ ಮತ್ತು ಅಶ್ಲೀಲ ಪದ ಪ್ರಯೋಗ ಆಗಿದ್ದು, ಜಾಮೀನು ರಹಿತ ಕೇಸ್​​ ಇದಾಗಿದೆ. ಹಿರೇಬಾಗೇವಾಡಿ ಠಾಣೆ ಪೊಲೀಸ್ರು ಎಫ್​ಐಆರ್​ ಮಾಡಿದ್ದಾರೆ. ಹೀಗಾಗಿ ಸಿ.ಟಿ ರವಿ ಬಂಧನವಾಗಿದೆ.

ಇಂದು ವಿಧಾನ ಪರಿಷತ್ ಅಧಿವೇಶನದ ವೇಳೆ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪವಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವೇ.. ಎಂಬ ಪದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಈ ಪದ ಬಳಕೆಯಿಂದ ಲಕ್ಷ್ಮೀ ಹೆಬ್ಬಾಳ್ಕರ್ ಅಧಿವೇಶನದಲ್ಲಿಯೇ ಕಣ್ಣೀರು ಹಾಕಿದ್ದಾರೆ. ಯಾವುದೇ ಹೆಣ್ಣು ಮಗುವಿಗಾಗಲೀ ಅಂಥಹ ಕೆಟ್ಟ ಪದ ಬಳಕೆ ಮಾಡಿದರೆ ಸಹಿಸುವುದಾದರೂ ಹೇಗೆ..? ಸಿಎಂ ಸಿದ್ದರಾಮಯ್ಯ ಅವರಿಂದ ಹಿಡಿದು ಉಮಾಶ್ರೀ ಸೇರಿದಂತೆ ಕಾಂಗ್ರೆಸ್ ನಾಯಕರು ಸಿಟಿ ರವಿ ನಡೆಯನ್ನು ವಿರೋಧಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment