Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಮಗೆ ಸಿಕ್ಕ ಈ ಅವಕಾಶ ಜನಪರ ಕೆಲಸಗಳಿಗೆ ಉಪಯೋಗ ಮಾಡಿಕೊಳ್ಳಿ : ಸಿಎಂ ಡಿಕೆಶಿಗೆ ಹೆಚ್.ಡಿ.ಕುಮಾರಸ್ವಾಮಿ ಶುಭಹಾರೈಕೆ

---Advertisement---

ಸುದ್ದಿಒನ್,ಬೆಂಗಳೂರು,ಜೂನ್.03: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶುಭ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಮೂಲಕ ವಿಶೇಷವಾಗಿ ಶುಭ ಕೋರಿದ ಹೆಚ್.ಡಿ.ಕುಮಾರಸ್ವಾಮಿ,ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ.

ಕರ್ನಾಟಕ ರಾಜಕಾರಣದಲ್ಲಿ ಇಂದು ಹೊಸದೊಂದು ಐತಿಹಾಸಿಕ ಅಧ್ಯಾಯ ಆರಂಭವಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಲೋಕಭವನದ ಗಾಜಿನಮನೆಯಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರು ನೂತನ ಸಿಎಂಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

Join WhatsApp

Join Now

Join Telegram

Join Now