Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್ 24 ರಂದು ಚಿತ್ರದುರ್ಗಕ್ಕೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮನ : ಎನ್.ರವಿಕುಮಾರ್ ಮಾಹಿತಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552,

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 18  : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಪರ ಬಹಿರಂಗ ಪ್ರಚಾರಕ್ಕೆ ಇದೇ ತಿಂಗಳ 24 ರಂದು ಚಿತ್ರದುರ್ಗಕ್ಕೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದು, ಬೃಹತ್ ರೋಡ್‍ಶೋ ನಡೆಸಲಾಗುವುದೆಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದರು.

 

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು 19, 20, 21 ರಂದು ಚಿತ್ರದುರ್ಗದ 35 ವಾರ್ಡ್‍ಗಳಲ್ಲಿಯೂ ಮನೆ ಮನೆಗೆ ಅಭಿಯಾನ ಹಮ್ಮಿಕೊಂಡಿದ್ದು, ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರ ಪರ ಮತಯಾಚಿಸಲಾಗುವುದು. 2167 ಬೂತ್‍ಗಳಿಗೂ ಅಭಿಯಾನ ಸಂಪರ್ಕಿಸಲಿದ್ದು, 21 ರಂದು ರಾತ್ರಿ ಎಂಟು ಗಂಟೆಯೊಳಗಾಗಿ ಶೇ. 96 ರಷ್ಟು ಮತದಾರರನ್ನು ತಲುಪುವ ಗುರಿಯಿಟ್ಟುಕೊಂಡಿದ್ದೇವೆಂದು ಹೇಳಿದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರ ಹಾಗೂ ನಗರದ 35 ವಾರ್ಡ್‍ಗಳಲ್ಲಿ ಅಭಿಯಾನ ಸಂಚರಿಸಲು ತಯಾರಿ ನಡೆಸುತ್ತಿದ್ದು, ಗೋವಿಂದ ಕಾರಜೋಳರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲಾಗುವುದು. ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ನಲವತ್ತು ಸೀಟುಗಳನ್ನು ಗೆಲ್ಲುವುದು ಕಷ್ಟ. ದೇಶದೆಲ್ಲೆಡೆ ಮೋದಿ ಅಲೆ ಇರುವುದರಿಂದ ಈ ಚುನಾವಣೆಯಲ್ಲಿ ಗೆಲ್ಲುವ ಗೋವಿಂದ ಕಾರಜೋಳರವರು ಕೇಂದ್ರ ಮಂತ್ರಿಯಾಗುವುದು ಖಚಿತ. ಕಾಂಗ್ರೆಸ್‍ಗೆ ಪಾರ್ಲಿಮೆಂಟ್‍ನಲ್ಲಿ ವಿರೋಧ ಪಕ್ಷದ ಸ್ಥಾನಮಾನ ಸಿಗುವುದು ಕಷ್ಟ ಎಂದರು.

ಜೆಡಿಎಸ್.ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರ ಪರ ಮತಯಾಚಿಸಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿರವರು ಶುಕ್ರವಾರ ಹಿರಿಯೂರು ಹಾಗೂ ಪರಶುರಾಂಪುರಕ್ಕೆ ಆಗಮಿಸಲಿದ್ದಾರೆ. ಎರಡು ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಗೋವಿಂದ ಕಾರಜೋಳರವರ ಗೆಲುವು ಸುಲಭವಾಗಲಿದೆ ಎಂದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ನಗರಸಭೆ ಸದಸ್ಯರುಗಳಾದ ಶಶಿಧರ್, ಹರೀಶ್, ಭಾಸ್ಕರ್, ತಾರಕೇಶ್ವರಿ, ಮಂಜುಳ, ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ತಿಪ್ಪಮ್ಮ ವೆಂಕಟೇಶ್, ಅಭ್ಯರ್ಥಿ ಗೋವಿಂದ ಕಾರಜೋಳ ಪತ್ರಿಕಾಗೋಷ್ಠಿಯಲ್ಲಿದ್ದರು.

 

ತಿಪ್ಪಾರೆಡ್ಡಿ ವಿರುದ್ದ ಮುನಿಸಿಕೊಂಡಿದ್ದವರು ಬಿಜೆಪಿ. ಕಚೇರಿಯಲ್ಲಿ ಪ್ರತ್ಯಕ್ಷ :

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ. ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ ವಿರುದ್ದ ಮುನಿಸಿಕೊಂಡು ಕಾಂಗ್ರೆಸ್‍ನ ಕೆ.ಸಿ.ವೀರೇಂದ್ರಪಪ್ಪಿ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದ ಕೆಲವು ನಗರಸಭೆ ಸದಸ್ಯರುಗಳು ಗುರುವಾರ ಬಿಜೆಪಿ. ಕಚೇರಿಯಲ್ಲಿ ಪ್ರತ್ಯಕ್ಷವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರಿಗೆ ಬೆಂಬಲ ಸೂಚಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಜಿ.ಹೆಚ್.ತಿಪ್ಪಾರೆಡ್ಡಿರವರನ್ನು ಶತಗತಾಯ ಸೋಲಿಸಬೇಕೆಂಬ ಹಠತೊಟ್ಟು ಕಾಂಗ್ರೆಸ್‍ನ ವೀರೇಂದ್ರಪಪ್ಪಿ ಕಡೆ ಹಾರಿದ್ದ ನಗರಸಭೆ ಅಧ್ಯಕ್ಷೆ ಶ್ರೀಮತಿ ತಿಪ್ಪಮ್ಮ, ಪತಿ ಸದಸ್ಯ ವೆಂಕಟೇಶ್, ಶಶಿಧರ್, ಭಾಸ್ಕರ್, ಮಂಜುಳ, ತಾರಕೇಶ್ವರಿ ಮಾಜಿ ಸದಸ್ಯ ಮಹೇಶ್ ಇವರುಗಳು ಬಿಜೆಪಿ. ಕಚೇರಿಗೆ ಆಗಮಿಸಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಗೋವಿಂದ ಕಾರಜೋಳರವರ ಪರ ನಿಲ್ಲುವುದಾಗಿ ಸಮ್ಮತಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!