Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅದ್ದೂರಿಯಾಗಿ ನೆರವೇರಿದ ಉತ್ತರಾರಾಧನಾ ಮಹಾರಥೋತ್ಸವ : ವಿಡಿಯೋ ನೋಡಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆ.01 : ಶ್ರೀ ಗುರುರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ಪ್ರಯುಕ್ತ (ಶ್ರಾವಣಮಾಸ ಕೃಷ್ಣಪಕ್ಷ ತೃತೀಯಾ) ನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಶಾಖಾ ಮಠದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಬೆಳಗ್ಗೆ ನಿರ್ಮಾಲ್ಯ, ಅಷ್ಟೋತ್ತರ ಸಹಿತ ವಿಶೇಷ ಫಲ ಪಂಚಾಮೃತ ಅಭಿಷೇಕ, ಶ್ರೀ ಗುರುರಾಯರ ವೃಂದಾವನಕ್ಕೆ ವಿಶೇಷ ಫಲ ಅಲಂಕಾರ, ನಗರದ ಪ್ರಮುಖ ರಾಜಬೀದಿಗಳಲ್ಲಿ ಮಹಾ ರಥೋತ್ಸವ, ಉತ್ಸವರಾಯರ ಪಾದಪೂಜೆ, ಕನಕಾಭಿಷೇಕ, ಮಧ್ಯಾಹ್ನ ನೈವೇದ್ಯ, ಅಲಂಕಾರ ಪಂಕ್ತಿ, ಹಸ್ತೋದಕ, ಮಹಾ ಮಂಗಳಾರತಿ, ತೀರ್ಥ ಪ್ರಸಾದಗಳು ನೆರವೇರಿದವು. ಸಾವಿರಾರು ಮಂದಿ ಭಕ್ತಾದಿಗಳು ಅನ್ನದಾನ ಮಹಾಪ್ರಸಾದ ಸ್ವೀಕರಿಸಿದರು.

ಈ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ ಶ್ರೀ ಸಪ್ತಗಿರಿ ಭಜನಾಮಂಡಳಿಯವರಿಂದ ಭಜನೆ, ನಂತರ ಫಲ್ಗುಣಿ ಕಲಾತಂಡ ಹರಿಹರ ಅವರಿಂದ ನೃತ್ಯ ಕಾರ್ಯಕ್ರಮ, ತದನಂತರ ಕುಮಾರಿ ಸ್ತುತಿ ಆರ್ ರಾವ್ ಅವರಿಂದ ದಾಸವಾಣಿ ಕಾರ್ಯಕ್ರಮ ನಡೆಯಿತು.

ತದನಂತರದಲ್ಲಿ ರಜತ ರಥೋತ್ಸವ, ಸ್ವಸ್ತಿವಾಚನ, ಅಷ್ಟಾವಧಾನ, ಮಹಾಮಂಗಳಾರತಿಯ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಪಾಲ್ಗೊಂಡು ಪುನೀತರಾದರು.

ಮೂರೂ ದಿನ ಆರಾಧನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ಸಕಲ ಸದ್ಭಾಕ್ತಾದಿಗಳಿಗೆ ಶ್ರೀಮಠದ ಪರವಾಗಿ ವ್ಯವಸ್ಥಾಪಕರಾದ ಪ್ರಾಣೇಶ್ ಕೊಪ್ಪರ್ ಅವರು ಹಾಗೂ ಗೌರವ ವಿಚಾರಣಕರ್ತರಾದ ಗೋವಿಂದಮೂರ್ತಿ ಅವರು ಸದ್ಭಕ್ತರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...