ಸುದ್ದಿಒನ್, ಉತ್ತರಕಾಶಿ, ನವೆಂಬರ್ 24: ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿ ಸುರಂಗ ಕುಸಿತದ ಘಟನೆಯಲ್ಲಿ ಸಿಲುಕಿರುವ ಕಾರ್ಮಿಕರು ಶುಕ್ರವಾರವೂ ಹೊರಬರಲು ಸಾಧ್ಯವಾಗಿಲ್ಲ. ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ 41 ಕಾರ್ಮಿಕರು ಸಿಲುಕಿದ್ದಾರೆ. ಶುಕ್ರವಾರವೂ ಅಮೆರಿಕದ ಆಗರ್ ಯಂತ್ರದ ಮೂಲಕ ಅವಶೇಷಗಳನ್ನು ತೆಗೆಯಲು ಸಾಧ್ಯವಾಗಲಿಲ್ಲ. ಯಂತ್ರದ ಬದಲು ಮನುಷ್ಯರಿಂದ ಅವಶೇಷಗಳನ್ನು ತೆಗೆಯಬಹುದೇ? ಎಂದು ತಜ್ಞರು ಪರಿಶೀಲಿಸುತ್ತಿದ್ದಾರೆ.
ಮತ್ತೊಂದೆಡೆ, ಈ ಹಿಂದೆ ವಿಪತ್ತು ತಡೆ ತಂಡಗಳು ಅವಶೇಷಗಳನ್ನು ತೆಗೆಯುವಾಗ ಎದುರಾದ ಕಬ್ಬಿಣದ ತೊಲೆಯನ್ನು ಕತ್ತರಿಸಿ ಕೊರೆಯುವಿಕೆಯನ್ನು ಪುನರಾರಂಭಿಸಿದ್ದರು.
ರಕ್ಷಣೆಗಾಗಿ ಕಬ್ಬಿಣದ ಪೈಪ್ ವೆಲ್ಡಿಂಗ್ ಆರಂಭಿಸಲಾಗಿದೆ.
57 ಮೀಟರ್ ನಲ್ಲಿ ಆಗರ್ ಯಂತ್ರದ ಮೂಲಕ 48 ಮೀಟರ್ ವರೆಗೆ ಅಗೆದಿದೆ. ಪೈಪ್ ಮೂಲಕ ಕಾರ್ಮಿಕರನ್ನು ಕರೆತರುವ ಪ್ರಕ್ರಿಯೆಯಲ್ಲಿ ಎನ್ಡಿಆರ್ಎಫ್ ಸಿಬ್ಬಂದಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.
ಈ ಭಾಗದ ಗ್ರಾಮಸ್ಥರು ಸ್ಥಳೀಯ ದೇವತೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಾಚರಣೆ ಯಶಸ್ವಿಯಾಗುವಂತೆ ಪ್ರಾರ್ಥಿಸುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











