Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿ ಸೋಮಣ್ಣ ಕಾಂಗ್ರೆಸ್ ಸೇರುವುದು ಪಕ್ಕನಾ..?

---Advertisement---

ಬೆಂಗಳೂರು: ವಿ ಸೋಮಣ್ಣ ಅವರಗೆ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿರುವುದು ಈಗಾಗಲೇ ಎಲ್ಲರಿಗೂ ಗೊತ್ತಾಗಿದೆ. ಬಿಜೆಪಿ ನಾಯಕರು ಸಮಾಧಾನ ಮಾಡುವುದಕ್ಕೂ ಪ್ರಯತ್ನ ಮಾಡಿದ್ದಾರೆ. ಆದರೆ ಆ ಅಸಮಾಧಾನ ಸರಿ ಆಗಿಲ್ಲ ಎಂದೇ ಕಾಣುತ್ತಿದೆ. ಇದೀಗ ಹೊಸದೊಂದು ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ. ಡಿಸೆಂಬರ್ 6ರಂದು ಬಿಡಿಬಿಡಿಯಾಗಿ ಹೇಳುತ್ತೇನೆ ಎಂದಿದ್ದಾರೆ.

ಸೋಮಣ್ಣ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧೆಗೆ ಇಳಿಯುತ್ತಾರೆ ಎಂಬ ಮಾತು ಕೂಡ ಇದೆ. ಇತ್ತಿಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಸೋಮಣ್ಣ ಅವರ ಬಗ್ಗೆ ಹೊಗಳಿಕೆಯ ಮಾತುಗಳನ್ನು ಆಡಿದ್ದರು. ಹೀಗಾಗಿ ಸೋಮಣ್ಣ ಕಾಂಗ್ರೆಸ್ ಸೇರುವುದು ಪಕ್ಕಾ ಎನ್ನಲಾಗಿತ್ತು. ಇದೀಗ ಅದಕ್ಕೆ ಪುಷ್ಟಿ ನೀಡುವಂತ ಮಾತುಗಳನ್ನ ಆಡಿದ್ದಾರೆ.

ಇಂದು ಮಾತನಾಡಿರುವ ವಿ ಸೋಮಣ್ಣ, ಡಿಸೆಂಬರ್ 6 ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಅಂದು ಎಲ್ಲವನ್ನು ಬಿಡಿ ಬಿಡಿಯಾಗಿ ವಿವರಿಸುತ್ತೇನೆ. ನನ್ನ ಯಾರು ಸಂಪರ್ಕಿಸಿಲ್ಲ, ನಾನು ಯಾರನ್ನು ಸಂಪರ್ಕಿಸಿಲ್ಲ. ಪಕ್ಷದಲ್ಲಿ ಒಂದು ರೀತಿಯಲ್ಲಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಅರವಿಂದ ಲಿಂಬಾವಳಿ ಹೇಳಿದ ಮಾತಿಗೆ ನನ್ನ ಪೂರ್ಣ ಸಮ್ಮತಿ ಇದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment