Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ಟೋಬರ್ 17ರಿಂದ ವಿವಿ ಸಾಗರದ ನಾಲೆಗಳಿಗೆ ( ರೈತರ ಅಚ್ಚುಕಟ್ಟು ಪ್ರದೇಶಕ್ಕೆ) ನೀರು ಹರಿಸಲು ನಿರ್ಧಾರ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ 
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.13 : ಇದೇ ಅಕ್ಟೋಬರ್ 17 ರಿಂದ ನವೆಂಬರ್ 11 ರ ವರೆಗೂ ವಿ.ವಿ. ಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಆರ್.ಜೆ. ತಿಳಿಸಿದರು.

ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಯೋಜಿಸಲಾಗಿತ್ತು. ಈ  ಸಭೆಗೆ ವಿಶೇಷ ಆಹ್ವಾನಿತರಾಗಿ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಆದ ಡಿ.ಸುಧಾಕರ್ ಆಗಮಿಸಿದ್ದರು.

ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಅತೀ ಕಡಿಮೆ ಮಳೆಯಾಗಿ, ಬರಗಾಲ ಪೀಡಿತವಾಗಿರುವುದರಿಂದ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರು ಅವಶ್ಯವಾಗಿರುತ್ತದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಲಹಾ ಸಮಿತಿ ಸದಸ್ಯರುಗಳು ಹಾಗೂ ಅಧಿಕಾರಿಗಳು ತಿಳಿಸುತ್ತಾ, ವಿವಿ.ಸಾಗರ ಜಲಾಶಯದಿಂದ ಒಂದು ಹದದ ನೀರನ್ನು 30 ದಿನಗಳ, ಕಾಲ,
ನಾಲೆಗಳಿಗೆ ಹರಿಸುವಂತೆ ಮಾನ್ಯ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ನೀರು ನಾಲೆಗಳಲ್ಲಿ ಹರಿಸುವುದರಿಂದ ನಾಲೆಯ ಅಕ್ಕಪಕ್ಕದ ಎಲ್ಲಾ ಗ್ರಾಮಗಳ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ. ಅಲ್ಲದೇ ತೋಟಗಾರಿಕೆ ಬೆಳೆಗಳು ಹಾಗೂ ಅಲ್ಪ ಸ್ವಲ್ಪ ಒಣಗಿರುವ ಬೆಳೆಗಳನ್ನು ಉಳಿಸಿಕೊಳ್ಳಬಹುದು ಎಂದು ಸಲಹಾ ಸಮಿತಿ ಸದಸ್ಯರು ಅಭಿಪ್ರಾಯ ತಿಳಿಸಿದರು.

ಸದಸ್ಯರ ಮನವಿಯ ಮೇರೆಗೆ ಸಲಹಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಯವರು ದಿನಾಂಕ 17.10.2023  ರಿಂದ 16,11.2023 ರವರೆಗೆ ನೀರು ಹರಿಸಲು ಸೂಚಿಸಿದರು. ಪ್ರಸ್ತುತ ವಿವಿ ಸಾಗರ ಜಲಾಶಯದಲ್ಲಿ 121.15 ಅಡಿಗಳಷ್ಟು ಮತ್ತು 22.00 ಟಿ.ಎಂ.ಸಿ. ನೀರು ಇದೆ.

ಎಲ್ಲಾ ಇಲಾಖೆಯ ಸಹಯೋಗದೊಂದಿಗೆ ಸಮರ್ಪಕವಾದ ನೀರು ನಿರ್ವಹಣೆ ಮಾಡಲು ಹಾಗೂ ನೀರು ಯಾವುದೇ ಕಾರಣಕ್ಕೆ ಪೋಲಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ  ಸಚಿವರು ನಿರ್ದೇಶನ ನೀಡಿದರು.

ಮಾನ್ಯ ಜಿಲ್ಲಾಧಿಕಾರಿಗಳು ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳಿಗೆ ನೀರು ಹರಿಸುವ ಪೂರ್ವದಲ್ಲಿ ಮುಂಜಾಗ್ರತಾವಾಗಿ ಜನ ಜಾನುವಾರುಗಳಿಗೆ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರವಹಿಸಲು ವ್ಯಾಪಕವಾಗಿ ಜಾಗೃತಿ ಮೂಡಿಸಲು ಸೂಚಿಸಿದರು.

ಈ ಸಭೆಯಲ್ಲಿ ಭಾಗವಹಿಸಿದ ಸಲಹಾ ಸಮಿತಿ ಸದಸ್ಯರುಗಳಾದ .ಕೆ.ಟಿ.ತಿಪ್ಪೇಸ್ವಾಮಿ, ಶ್ರೀ.ಸಿದ್ದರಾಮಣ್ಣ,  ಶ್ರೀ.ಆರ್.ಗೌಡ ಮತ್ತು ಶ್ರೀ ರಾಮಕುಮಾರ್ ಹಾಗೂ ಅಧಿಕಾರಿಗಳಾದ ವಿಜಯಕುಮಾರ್.ಎ.ಎಂ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ವಿ.ವಿ.ಸಾಗರ ಉಪವಿಭಾಗ, ಹಿರಿಯೂರು, ಲೋಕೇಶ್, ಹಿರಿಯ ಸಹಾಯಕ ನಿರ್ದೇಶಕರು – ತೋಟಗಾರಿಕಾ ಇಲಾಖೆ, ಹಿರಿಯೂರು,  ಕಿರಣ್, ಸಹಾಯಕ ಕೃಷಿ ಅಧಿಕಾರಿಗಳು, ಹಿರಿಯೂರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!