Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಬ್ಬ ಭಾರತೀಯನಾಗಿ ಲಸಿಕೆ ಸಾಧನೆ ಶ್ಲಾಘಿಸಬೇಕಿತ್ತು : ಸಿದ್ದರಾಮಯ್ಯ ವಿರುದ್ಧ ಸುಧಾಕರ್ ಗರಂ..!

Facebook
Twitter
Telegram
WhatsApp

ಹುಬ್ಬಳ್ಳಿ: ಲಸಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿ ಟೀಕೆ ಮಾಡಿದ್ರು. ಇದೀಗ ಸಿದ್ದರಾಮಯ್ಯ ನವರ ಹೇಳಿಕೆಗೆ ಸಚಿವ ಸುಧಾಕರ್ ಟಾಂಗ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯನವರು ಯಾವುದೇ ಪ್ರಗತಿ ಕಾರ್ಯವನ್ನು ವಿರೋಧಿಸುತ್ತಾರೆ. ವಿರೋಧ ಪಕ್ಷದ ನಾಯಕರಾಗಿ ಅಲ್ಲದಿದ್ದರೂ, ಒಬ್ಬ ಭಾರತೀಯರಾಗಿ ಕೋವಿಡ್ ಲಸಿಕೆಯ ಸಾಧನೆಯನ್ನು ಅವರು ಶ್ಲಾಘಿಸಬಹುದಿತ್ತು. ಸರ್ಕಾರ ನೀಡುವ ಅಂಕಿ, ಸಂಖ್ಯೆಯನ್ನು ಬುಡಮೇಲು ಮಾಡಿ ಅವರದ್ದೇ ಆದ ಅಂಕಿ, ಸಂಖ್ಯೆ ನೀಡಿದ್ದಾರೆ. ಅವರು ಕೂಡ ಮುಖ್ಯಮಂತ್ರಿಯಾಗಿದ್ದು, ಆಗಲೂ ಇದೇ ಇಲಾಖೆ ಅಂಕಿ ಅಂಶ ನೀಡುತ್ತಿತ್ತು. ಇಂತಹ ನಾಯಕರಿಂದ ಈ ರೀತಿಯ ಪ್ರತಿಕ್ರಿಯೆ ನಿರೀಕ್ಷಿಸಿರಲಿಲ್ಲ ಎಂದರು.

ಲಸಿಕೆಯ ವಿಚಾರದಲ್ಲೂ ಅನೇಕರು ರಾಜಕಾರಣ ಮಾಡಿದರು. ಒಂದಾಗಿ ಹೋರಾಡಬೇಕಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕಾರಣದಲ್ಲಿ ತೊಡಗಿಕೊಂಡಿತು. ಸಹಕಾರದ ಹೆಸರಲ್ಲಿ ಅಸಹಕಾರ ಮಾಡಿದರು. ಇದನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ. ಲಸಿಕೆ ಬಂದಾಗ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದರು. ಮೋದಿ ಲಸಿಕೆ, ಬಿಜೆಪಿ ಲಸಿಕೆ ಎಂದು ಹೇಳಿದರು. ಪ್ರಾರಂಭದಲ್ಲಿ ಜನರು ಇವರ ಮಾತು ನಂಬಿ ಲಸಿಕೆ ಪಡೆಯದೆ ಪ್ರಾಣ ಕಳೆದುಕೊಂಡಿರುವ ಉದಾಹರಣೆಯೂ ಇದೆ. ಕಾಂಗ್ರೆಸ್ ಗೆ ಈಗ ನೈತಿಕತೆ ಇದೆಯೇ ಎಂದು ಪ್ರಶ್ನೆ ಮಾಡಬೇಕು. ಮೋದಿ ಲಸಿಕೆ ಎಂದವರು ಸಾಲಿನಲ್ಲಿ ನಿಂತು ಲಸಿಕೆ ಪಡೆದರು ಎಂದರು.

ಕೋವಿಡ್ ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ ಮಾಡಿದೆ. ಪ್ರತೀ ದಶ ಲಕ್ಷ ಜನ ಸಂಖ್ಯೆಗೆ ರಷ್ಯಾದಲ್ಲಿ 1,500, ಇಂಗ್ಲೆಂಡ್ ನಲ್ಲಿ 2,020 ಜನ ಕೋವಿಡ್ ನಿಂದ ಮೃತರಾಗಿದ್ದರೆ ಭಾರತದಲ್ಲಿ 323 ಜನರು ಕೋವಿಡ್ ನಿಂದ ಮೃತರಾಗಿದ್ದಾರೆ ಎಂದರು.

ನಾನು ಅಧಿಕಾರದ ಮದದಿಂದ ಏನನ್ನೂ ಮಾತನಾಡಿಲ್ಲ. ಜವಾಬ್ದಾರಿಯಿಂದ ಕೆಲವು ಪ್ರಶ್ನೆಗಳನ್ನು ಕೇಳಿದ್ದೇನೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿಶೇಷ ಗೌರವವಿದೆ. ಕೋಲಾರ ಡಿಸಿಸಿ ಬ್ಯಾಂಕ್ ನಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಆರೇಳು ವರ್ಷಗಳಿಂದ ಅವರು ಸಿಎಂ ಆಗಿದ್ದಾಗಿನಿಂದಲೂ ಈ ಸಮಸ್ಯೆ ಇದೆ. ಕೆ.ಎಚ್.ಮುನಿಯಪ್ಪನವರು ಆಗಲೇ ಈ ಕುರಿತು ದೂರು ನೀಡಿದ್ದರು. ತನಿಖೆಗೆ ಆದೇಶ ನೀಡಿ ಎಂದು ಅವರು ಕೋರಿದ್ದರು. ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ತನಿಖೆ ಮಾಡಿಸಲು ಒಪ್ಪಲೇ ಇಲ್ಲ. ಇಂದು ಕೂಡ ಅವರ ಪಕ್ಷದ ನಾಯಕರು, ಹಿಂಬಾಲಕರು ಮಾಡುವ ತಪ್ಪನ್ನು ಅವರು ಸಮರ್ಥನೆ ಮಾಡಿಕೊಳ್ಳುತ್ತಾರೆಯೇ? ಭ್ರಷ್ಟಾಚಾರದ ಪರವಾಗಿ ಅವರು ಇದ್ದಾರಾ? ಎಂದು ಪ್ರಶ್ನೆ ಮಾಡಿದರು.

ಸಹಕಾರ ಕ್ಷೇತ್ರದ ಜನರಿಗೆ, ರೈತರಿಗೆ ಸರಿಯಾದ ಆಡಳಿತ ನೀಡಬೇಕೆಂಬ ಬದ್ಧತೆ ಇದ್ದರೆ, ಅವರೇ ತನಿಖೆಗೆ ಆದೇಶ ಮಾಡಿ ಎಂದು ಒತ್ತಾಯ ಮಾಡಬೇಕಿತ್ತು. ಆದರೆ ವಿರೋಧ ಪಕ್ಷದ ನಾಯಕರ ಕೆಲಸವನ್ನು ನಾನು ಮಾಡುತ್ತಿದ್ದೇನೆ. ಇದನ್ನು ಅಧಿಕಾರದ ಮದ ಎನ್ನುವುದಾದರೆ ಜನರ ತೀರ್ಮಾನಕ್ಕೆ ಬಿಡುತ್ತೇನೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!