Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಚನಗಳು ದಿನನಿತ್ಯದ ಜೀವನದಲ್ಲಿ ಹಾಸು ಹೊಕ್ಕಾಗಿವೆ :  ಡಾ.ಶ್ರೀನಿವಾಸಶೆಟ್ಟಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.23 : ವಚನಗಳು ಅಳಿಸಲ್ಲ. ದಿನನಿತ್ಯದ ಜೀವನದಲ್ಲಿ ಹಾಸು ಹೊಕ್ಕಾಗಿದೆ ಎಂದು ಡಾ.ಶ್ರೀನಿವಾಸಶೆಟ್ಟಿ ಹೇಳಿದರು.

ಗುರು ಪುಟ್ಟರಾಜ ಸಂಗೀತ ಸಭಾ ಮೈಸೂರು, ಚಿಲಿಪಿಲಿ ಸಂಗೀತ ಸಾಂಸ್ಕøತಿಕ ಕಲಾ ಅಕಾಡೆಮಿ ಇವರುಗಳ ಸಂಯುಕ್ತಾಶ್ರಯದಲ್ಲಿ ತಮಟಕಲ್ಲು ರಸ್ತೆಯಲ್ಲಿರುವ ಸರಿಗಮಪ ಸಂಗೀತ ಪಾಠಶಾಲೆಯಲ್ಲಿ ನಡೆದ ವಚನ ಗಾಯನ ಸ್ಪರ್ಧೆಯನ್ನು ತಬಲ ಬಾರಿಸುವ ಮೂಲಕ ಉದ್ಗಾಟಿಸಿ ಮಾತನಾಡಿದರು.

ಸಂಗೀತದಲ್ಲಿ ಎಲ್ಲರಿಗೂ ಆಸಕ್ತಿಯಿರುತ್ತದೆ. ಸಂಗೀತ ಹಾಡಲು ಗಂಟಲೇ ಇರಬೇಕೆಂದಿಲ್ಲ. ಆಸ್ವಾಧಿಸುವ ಕಿವಿಗಳಿದ್ದರೆ ಸಾಕು. ಹಿಂದೂಸ್ತಾನಿ ಸಂಗೀತವೆಂದರೆ ನನಗೆ ತುಂಬಾ ಇಷ್ಟ. ಸಮಾಜದಿಂದ ಎಲ್ಲಾ ತೆಗೆದುಕೊಂಡಿದ್ದೇವೆ. ಆದರೆ ಸಮಾಜಕ್ಕೆ ನಾವೇನು ಕೊಟ್ಟಿದ್ದೇವೆಂದು ಯೋಚಿಸುವುದು ಮುಖ್ಯ. ಕೆ.ಆರ್.ಎಸ್. ಡ್ಯಾಂ ಕಟ್ಟುವಾಗ ಮೈಸೂರು ಮಹಾರಾಜರು ಹಾಗೂ ಅವರ ಪತ್ನಿ ಇಬ್ಬರು ಸೇರಿ ತಮ್ಮಲ್ಲಿದ್ದ ಬೆಳ್ಳಿ, ಬಂಗಾರ, ವಜ್ರ, ವೈಡೂರ್ಯಗಳನ್ನೆಲ್ಲಾ ಮಾರಿ ಸಾರ್ವಜನಿಕರಿಗೆ ಉಪಯೋಗ ಮಾಡಿದ್ದಾರೆ. ಸಂಗೀತಕ್ಕೆ ಎಲ್ಲರನ್ನು ತಲೆದೂಗಿಸುವ ಶಕ್ತಿಯಿದೆ ಎಂದರು.

ಡಾ.ಎ.ಎಲ್.ದೇಸಾಯಿ, ಭೀಮಾಶಂಕರ ಬಿದನೂರು, ಸುಜೀತ ಕುಲಕರ್ಣಿ, ರಿಜ್ವಾನ್ ಬುದ್ದಹಳ್ಳಿ, ಗಂಗಾಧರ್ ಇವರುಗಳು ವೇದಿಕೆಯಲ್ಲಿದ್ದರು. ವಚನ ಗಾಯನ ಸ್ಪರ್ಧೆಯಲ್ಲಿ ಗಗನ್ ಕೆರೆನಹಳ್ಳಿ ಪ್ರಥಮ, ಶಾಲೂಮ್ ದ್ವಿತೀಯ, ಮಾರುತಿ ಟಿ. ತೃತೀಯ ಬಹುಮಾನ ಪಡೆದುಕೊಂಡರು. ಮೈಲಾರಿ ಎಸ್.ತುರುವನೂರು, ರಿದಾ ಹಸನ್ ಇವರುಗಳು ಸಮಾಧಾನಕರ ಬಹುಮಾನ ಗಿಟ್ಟಿಸಿಕೊಂಡರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...