ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 28 : ನಗರದ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಡಿಸೆಂಬರ್ 30 ರಂದು ಆರ್ಯವೈಶ್ಯ ಸಂಘದಿಂದ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ.
ಸಂಜೆ 5.30ರಿಂದ ವೈಕುಂಠ ದ್ವಾರದ ಮೂಲಕ ವಿಷ್ಣುವಿನ ವಿಶ್ವರೂಪ ದರ್ಶನವನ್ನು ವೀಕ್ಷಿಸಲು ಭಕ್ತಾದಿಗಳಿಗೆ ಉಚಿತವಾಗಿ ಏರ್ಪಡಿಸಲಾಗಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಲು ಆರ್ಯವೈಶ್ಯ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.














