Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಜಪೇಯಿ ಪಕ್ಷಬೇಧ ಮರೆತು ಹೇಳಿದ್ದಾರೆ: ಡಿ ಕೆ ಶಿವಕುಮಾರ್

Facebook
Twitter
Telegram
WhatsApp

 

ಬೆಂಗಳೂರು: ಶ್ರೀಮತಿ ಇಂದಿರಾಗಾಂಧಿ ಅವರನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ದುರ್ಗೆಗೆ ಹೋಲಿಸಿದರು. ದುರ್ಗೆ ಎಂದರೆ ದುಃಖವನ್ನು ದೂರ ಮಾಡುವ ದೇವಿ ಎಂದು ಅವರನ್ನು ಈ ರೀತಿ ಕರೆದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇಂದಿರಾಗಾಂಧಿ ಅವರು ಬಡತನ ನಿರ್ಮೂಲನೆ, ಎಲ್ಲ ವರ್ಗದ ಜನರ ಕಲ್ಯಾಣದ ಬಗ್ಗೆ ಆಲೋಚಿಸಿದರು. ಪಿಂಚಣಿ, ಸೇನೆ, ಮನೆ ನಿರ್ಮಾಣ, ಬ್ಯಾಂಕ್ ರಾಷ್ಟೀಕರಣ, ಅಂಗನವಾಡಿ, ಮಕ್ಕಳಿಗೆ ಬಿಸಿಯೂಟ, ವಸತಿ, ಕ್ರೀಡೆ, ಕೃಷಿ – ಹೀಗೆ ಎಲ್ಲವನ್ನೂ ಉತ್ತೇಜಿಸುವ ಕಾರ್ಯಕ್ರಮ ಕೊಟ್ಟರು. ಹೀಗಾಗಿ ವಾಜಪೇಯಿ ಅವರು ಪಕ್ಷಬೇಧ ಮರೆತು ಆ ಮಾತು ಹೇಳಿದ್ದಾರೆ. ದುರ್ಗೆಗೆ ಹೋಲಿಸಿದ್ದಾರೆ.

ಸವಾಲು ಮನೆ ಬಾಗಿಲಲ್ಲಿ ಇರುವುದಿಲ್ಲ, ನಾವು ಪರ್ವತ ಏರಬೇಕಿಲ್ಲ, ಸಮುದ್ರ ದಾಟಬೇಕಿಲ್ಲ. ನಮ್ಮ ಸವಾಲು ಹಳ್ಳಿಗಳಲ್ಲಿನ ಬಡತನ, ಪ್ರತಿ ಮನೆಯಲ್ಲಿರುವ ಜಾತಿ ವ್ಯವಸ್ಥೆ ಸರಿಪಡಿಸುವುದರಲ್ಲಿ ಇರುತ್ತದೆ, ಇರಬೇಕು. ಆಗ ದೇಶದ ಸಮಸ್ಯೆಗಳು ದೂರವಾಗುತ್ತವೆ ಎಂದು ಹೇಳಿದ್ದರು.

ಒಂದು ವ್ಯಕ್ತಿ, ಒಂದು ಸಂಸ್ಥೆ ಮೇಲೆ ಪ್ರೀತಿ ಇದ್ದರೆ ಸಾಲದು. ಪ್ರೀತಿ ಜತೆಗೆ ಸಾಮಾಜಿಕ ಕಳಕಳಿ, ಬದ್ಧತೆ ಇರಬೇಕು. ಇತಿಹಾಸ, ನಮ್ಮ ನಾಯಕರ ತ್ಯಾಗ, ಬಲಿದಾನವನ್ನು ಯುವ ಸಮುದಾಯಕ್ಕೆ ತಿಳಿಸಬೇಕು.
ಯೂತ್ ಕಾಂಗ್ರೆಸ್ ಸಮಾವೇಶಕ್ಕಾಗಿ ನಾವು ರೈಲು ಹತ್ತಿದಾಗ, ಮಧ್ಯೆ ಇಂದಿರಾಗಾಂಧಿ ಅವರ ನಿಧನ ಸುದ್ದಿ ಬಂತು. ಗಲಾಟೆ ಹೆಚ್ಚಾಗಿತ್ತು. ನಮ್ಮನ್ನು ಬಂಧಿಸಿದ್ದರು. ನಂತರ ನಾನು ಚಿತ್ರ ಮಂದಿರಕ್ಕೆ ಪರವಾನಿಗೆ ಅರ್ಜಿ ಕೇಳಿದ್ದೆ. ಆಗ ಜಿಲ್ಲಾಧಿಕಾರಿಗಳು ಯಾರ ಹೆಸರು ಇಡುತ್ತೀಯಾ ಎಂದು ಕೇಳಿದರು. ನಾನು ಇಂದಿರಾಗಾಂಧಿ ಅವರ ಹೆಸರು ಎಂದೆ. ಆಗ ಕೇವಲ 5 ನಿಮಿಷದಲ್ಲಿ ಸಹಿ ಹಾಕಿಕೊಟ್ಟರು ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!