Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ST ಸಮುದಾಯಕ್ಕೆ ಕುರುಬರ ಸೇರ್ಪಡೆಗೆ ವಾಲ್ಮೀಕಿ ವಿರೋಧ : ಸಭೆ ಕರೆದ ಪ್ರಸನ್ನಾನಂದಪುರಿ ಸ್ವಾಮೀಜಿ

---Advertisement---

ಸದ್ಯ ರಾಜ್ಯದಲ್ಲಿ ಎಸ್ಟಿ ಸಮುದಾಯಕ್ಕೆ ಕುರುಬರನ್ನ ಸೇರ್ಪಡೆ ಮಾಡುವ ಕುರಿತು ಬಾರೀ ಚರ್ಚೆಗಳು ಸರ್ಕಾರಿ ಮಟ್ಟದಲ್ಲಿ ನಡೆಯುತ್ತಿವೆ. ಆದರೆ ಇದಕ್ಕೆ ಅದೇ ಎಸ್ಟಿ ಸಮುದಾಯ ಅಂದ್ರೆ ವಾಲ್ಮೀಕಿ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ನಾಯಕ ಪೀಠಾಧಿಪತಿಗಳಾದ ಪ್ರಸನ್ನಾನಂದಪುರಿ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದು, ನಾಳೆ ತಮ್ಮ ಸಮುದಾಯದವರ ಸಭೆ ಕರೆದಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿರುವ ರಾಜನಹಳ್ಳಿ ಪೀಠದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ವಾಲ್ಮೀಕಿ ಮಠದಲ್ಲಿ ಸಭೆ ಕರೆದಿದ್ದಾರೆ. ಸಭೆಗೆ ವಾಲ್ಮೀಕಿ ಮಠದಲ್ಲಿ ನಾಯಕ ಸಮುದಾಯದ ಮಾಜಿ ಶಾಸಕರು, ಹಾಲಿ ಶಾಸಕರು ಮತ್ತು ಸಚಿವರಿಗೆ ಆಹ್ವಾನ ನೀಡಲಾಗಿದೆ. ಕುರುಬರನ್ನು STಗೆ ಸೇರಿಸಿದ್ರೆ ವಾಲ್ಮೀಕಿ ಸಮಾಜಕ್ಕೆ ಅನ್ಯಾಯವಾಗುತ್ತೆ. ಇದರ ಬಗ್ಗೆ ವಾಲ್ಮೀಕಿ ಸಮುದಾಯದ ನಾಯಕರು ಧ್ವನಿ ಎತ್ತುತ್ತಿಲ್ಲ. ಸದ್ಯ ವಾಲ್ಮೀಕಿ ಸಮುದಾಯಕ್ಕೆ ಕೇವಲ 7.5 ಮೀಸಲಾತಿ ಮಾತ್ರ ಇದೆ. ಕುರುಬ ಸಮಾಜ ST ಗೆ ಸೇರಿದ್ರೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಆಗುತ್ತೆ ಎಂಬ ಅಸಮಾಧಾನ ವಾಲ್ಮೀಕಿ ನಾಯಕ ಸಮುದಾಯದ ಜನರಲ್ಲಿದೆ. ಇನ್ನೂ ಜಾತಿಗಣತಿಯಲ್ಲಿ ದಲಿತ ಕ್ರಿಶ್ಚಿಯನ್, ನಾಯಕ ಕ್ರಿಶ್ಚಿಯನ್ ಅಂತ ಇದೆ ಈ ಎಲ್ಲಾ ವಿಚಾರಗಳು ಸಭೆಯಲ್ಲಿ ಚರ್ಚೆಗಳಾಗುತ್ತವೆ.

ಕುರುಬ ಸಮುದಾಯ ಈ ಹಿಂದಿನಿಂದಲೂ ತಮ್ಮನ್ನು ಎಸ್ಟಿ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಹೋರಾಟ ಮಾಡುತ್ತಿದೆ. ಈಗಾಗಲೇ ಜೇನು ಕುರಿಬ, ಕಾಡು ಕುರುಬ ಸಮುದಾಯಗಳು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾಗಿ ಎಸ್ಟಿ ಮೀಸಲಾತಿ ಲಾಭ ಪಡೆಯುತ್ತಿವೆ. ಹೀಗಾಗಿ ಕುರುಬ ಸಮುದಾಯವನ್ನು ಸೇರ್ಪಡೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...