Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಾಲ್ಮೀಕಿ ರಾಮಾಯಣ ಜಗತ್ತಿನ ಸಾಮಾಜಿಕ ಪಠ್ಯ : ಡಾ.ಜೆ.ಕರಿಯಪ್ಪ ಮಾಳಿಗೆ ಅಭಿಮತ

---Advertisement---

ಚಿತ್ರದುರ್ಗ. ಅ.07: ವಾಲ್ಮೀಕಿ ರಾಮಾಯಣ ಜಗತ್ತಿನ ಸಾಮಾಜಿಕ ಪಠ್ಯ. ಈ ಪಠ್ಯದಲ್ಲಿರುವ ಎಲ್ಲ ಅಂಶಗಳನ್ನು ಪರಿಶೀಲಿಸಿ ಅವುಗಳನ್ನು ವೈಜ್ಞಾನಿಕ ಹಾಗೂ ವೈಚಾರಿಕ ಚಿಂತಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು.

ನಗರದ ಸರ್ಕಾರಿ ಕಲಾ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶ್ರೀ ವಾಲ್ಮೀಕಿ ಜಯಂತಿಯಲ್ಲಿ ಅವರು ಮಾತನಾಡಿದರು.

ರಾಮಾಯಣ ಮಾನವ ಬದುಕಿನ ವಿಕಾಸದ ಚರಿತ್ರೆಯಾಗಿರುವುದರಿಂದ ಅದು ಮೌಖಿಕ ಮತ್ತು ಶಿಷ್ಟವಾಗಿ ಅದರ ವೇಗವು ಹೆಚ್ಚಿದೆ. ರಾಮನ ಬದಲಾಗಿ ವಾಲ್ಮೀಕಿಯ ವ್ಯಕ್ತಿತ್ವ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

 

ಐಕ್ಯೂಎಸಿ ಸಂಚಾಲಕಿ ಪ್ರೊ. ತಾರಿಣಿ ಶುಭದಾಯಿನಿ ಉಪನ್ಯಾಸ ನೀಡಿ, ಕವಿಗೆ ಕವಿಯಾಗಿದ್ದ ವಾಲ್ಮೀಕಿ. ಮಾನವೀಯತೆ, ಐಕ್ಯತೆ ಸಂಕೇತವಾಗಿದ್ದ ನಮಗೆ ವಾಲ್ಮೀಕಿ ಈಗ ಎಂಥವನಾಗಿರಬೇಕು ಎಂಬ ಪ್ರಶ್ನೆ ನಮ್ಮ ಮುಂದೆ ಇದೆ. ಸಾಂಸ್ಕೃತಿಕ ರಾಜಕಾರಣದ ಸಂಕಥನದ ಬೀಜ ರಾಮಾಯಣಲ್ಲಿ ಇವೆ. ಗ್ರೀಕ್ ಮಹಾಕವಿ ಸಹ ವಾಲ್ಮೀಕಿಯ ಹಾಗೆ ಇದ್ದ ಎಂಬ ಮೌಖಿಕ ಕಾವ್ಯಗಳು ಹೇಳುತ್ತವೆ. ಸಮುದಾಯದ ಚರಿತ್ರೆ ಮೌಖಿಕ ಕಾವ್ಯ ದೊರೆಯುತ್ತವೆ. ರಾಮಾಯಣಲ್ಲಿ ಹಲವು ಬುಡಕಟ್ಟಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಚರಿತ್ರೆಯ ಪರಂಪರೆ ಇದೆ. ಮನುಕುಲದ ಚರಿತ್ರೆ ಕುರಿತು ಗಂಭೀರವಾಗಿ ಚಿಂತನೆ ಮಾಡಿದವನು ವಾಲ್ಮೀಕಿ. ಹೀಗಾಗಿ ವಾಲ್ಮೀಕಿ ಬಗೆಗಿನ ಅವಾಜ್ಞೆಯ ಕಥೆಗಳನ್ನು ನಾವೆಲ್ಲರೂ ದೂರ ಮಾಡಿಕೊಳ್ಳಬೇಕು ಎಂದು ಹೇಳಿದರು.

ಪರೀಕ್ಷಾ ನಿಯಂತ್ರಣ ಅಧಿಕಾರಿ ಪ್ರೊ. ಬಿ ಸುರೇಶ್ ಮಾತನಾಡಿ, ಸಂಸ್ಕೃತದ ಕವಿ ಪಾಣಿನಿಯ ಅಷ್ಟಾಧ್ಯಾಯಿ ಕೃತಿಯ ನಂತರ ವಾಲ್ಮೀಕಿ ಮಹಾಕಾವ್ಯ ರಚನೆಯಾಗಿದೆ. ಭಾರತದ ಆಚೆಗೂ ವಾಲ್ಮೀಕಿ ಕಾವ್ಯ ವಿಸ್ತರಿಸಿಕೊಂಡು, 300ಕ್ಕೂ ಹೆಚ್ಚು ಮುದ್ರಣಗೊಂಡಿದೆ ಎಂದು ಹೇಳಿದರು.

ಪ್ರಾಧ್ಯಾಪಕರ ಸಂಘದ ಕಾರ್ಯದರ್ಶಿ ಪ್ರೊ ಹನುಮಂತಪ್ಪ, ಮಾತನಾಡಿದರು. ಮೇಲ್ವಿಚಾರಕ ರಂಗಸಾಥ, ಕನ್ನಡ ಸಹಾಯಕ ಪ್ರಾಧ್ಯಾಪಕ ಪ್ರೊ ಮಂಜುನಾಥ, ಪ್ರಾಧ್ಯಾಪಕಿ ಪ್ರೊ ಸೌಮ್ಯ, ಪ್ರೊ ಸಲ್ಮಾ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...