Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

---Advertisement---

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ ಮಾತನಾಡಿದ್ದು, ಗೆಲ್ಲಿಸಬೇಕೆಂದು ಮನವಿ ಮಾಡಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ ಜೋಶಿ ಅವರಿಗೆ ಟಿಕೆಟ್ ನೀಡಲಾಗಿದೆ. ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ನಿಲ್ಲಬೇಕು. ಅವರ ಬೆನ್ನೆಲುಬಾಗಿ ಇರಬೇಕು. ಅವರಿಗೆ ಶಕ್ತಿಯಾಗಿ ನಿಲ್ಲಬೇಕೆಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾಂದಪುರಿ ಸ್ವಾಮೀಜಿ ಆಗ್ರಹಿಸಿದ್ದಾರೆ. ಪ್ರಲ್ಹಾದ್‌ ಜೋಶಿಯವರು ಮತ್ತೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಂತ್ರಿಯಾಗಿ ನಮ್ಮೆಲ್ಲರ ಬೇಡಿಕೆಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಎಲ್ಲ ಸಮಾಜದ ಜನರನ್ನು ನಾವು ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿಯ ಐತಿಹಾಸಿಕ ಗೆಲುವಿಗೆ ಕಾರಣವಾಗಬೇಕು ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

 

ನಮ್ಮ ಸಮಾಜದ ಕಾರ್ಯಕರ್ತರನ್ನು ನಾಯಕರನ್ನಾಗಿಸಿದ್ದೇ ಪ್ರಲ್ಹಾದ್‌ ಜೋಶಿಯವರು. ಬಂಗಾರು ಹನುಮಂತು ರಾಜ್ಯ ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ಆಗಲು ಬೆನ್ನ ಹಿಂದೆ ನಿಂತು ಪ್ರೋತ್ಸಾಹಿಸಿ ಸಹಕರಿಸಿದವರು ಪ್ರಲ್ಹಾದ್‌ ಜೋಶಿ. ಬೆಂಗಳೂರಿನಲ್ಲಿ ತಾವು ಉಪವಾಸ ಧರಣಿ ಕುಳಿತ ವೇಳೆ ತನ್ನೆಲ್ಲ ಪ್ರೋಟೋಕಾಲ್ ಮರೆತು ನನ್ನನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಲ್ಲದೆ, ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ನಮ್ಮ ಬೇಡಿಕೆಗೆ ನ್ಯಾಯ ಒದಗಿಸಿದವರು ಪ್ರಲ್ಹಾದ್‌ ಜೋಶಿ. ಯಾವತ್ತೂ ಜಾತಿ ಭೇದ ತೋರಿದವರಲ್ಲ. ಎಲ್ಲ ಸಮಾಜ, ವರ್ಗದವರನ್ನು ಸಮಾನವಾಗಿ ಕಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಅಭಿಮಾನ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment