Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಲ್ಮೀಕಿ ಹಗರಣ : ಬಿ.ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ಮಂಜೂರು..!

Facebook
Twitter
Telegram
WhatsApp

ರಾಜ್ಯದಲ್ಲಿ ದೊಡ್ಡಮಟ್ಟಕ್ಕೆ ಸದ್ದು ಮಾಡಿದ್ದು ಎಂದರೆ ಅದು ವಾಲ್ಮೀಕಿ ಹಗರಣ. ವಿಪಕ್ಷ ನಾಯಕರು ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ದೊಡ್ಡ ಹೋರಾಟವನ್ನೇ ಮಾಡಿದರು. ಇದರಿಂದ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅವರು ರಾಜೀನಾಮೆಯನ್ನು ನೀಡಿದರು. ಪೊಲೀಸರು ನಾಗೇಂದ್ರ ಅವರನ್ನು ವಶಕ್ಕೆ ಪಡೆದು, ವಿಚಾರಣೆಯನ್ನು ನಡೆಸಿದ್ದರು. ಇದೀಗ ನಾಗೇಂದ್ರ ಅವರಿಗೆ ಜಾಮೀನು ಮಂಜೂರಾಗಿದೆ‌.

ಜನಪ್ರತಿನಿಧಿಗಳ ನ್ಯಾಯಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಇಂದು ನಾಗೇಂದ್ರ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ‌. 2 ಲಕ್ಷದ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡಲು ನ್ಯಾಯಾಲಯವೂ ಸೂಚನೆ ನೀಡಲಾಗಿತ್ತು. ಕೋರ್ಟ್ ಕೇಳಿದ್ದನ್ನು ನೀಡಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರು ಜಾಮೀನು ಪಡೆದಿದ್ದಾರೆ.

ವಾಲ್ಮೀಕಿ ಹಗರಣ ಸಣ್ಣ ಮಟ್ಟದ ಹಗರಣವಲ್ಲ. ತೀರಾ ದೊಡ್ಡಮಟ್ಟದ ಕೋಟ್ಯಾಂತರ ರೂಪಾಯಿಯ ಹಗರಣವಾಗಿದೆ. 197 ಕೋಟಿ, ಸಚಿವರ ಗಮನಕ್ಕೆ ಬಾರದೆ ಅವ್ಯವಹಾರ ನಡೆದಿದೆ ಎಂದೇ ವಾದ ಮಾಡಲಾಗಿತ್ತು. ಈ ಕೇಸ್ ದೊಡ್ಡದಾಗುತ್ತಾ ಹೋದಂತೆ, ಸಚುವ ಸ್ಥಾನಕ್ಕೆ ನಾಗೇಂದ್ರ ಅವರು ರಾಜೀನಾಮೆ ನೀಡಿದರು. ಬಳಿಕ ರಾಜ್ಯ ಸರ್ಕಾರ ಈ ಕೇಸನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸಲಾಗಿತ್ತು. ಇಡಿ ಕೂಡ ಈ ಕೇಸಲ್ಲಿ ತನಿಖೆ ನಡೆಸುವುದಕ್ಕೆ ಶುರು ಮಾಡಿತ್ತು. ಮೊದಲಿಗೆ ಲೋಕಾಯುಕ್ತ ಪೊಲೀಸರು ತಮ್ಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು‌. ಆದರೆ ಅದರಲ್ಲಿ ನಾಗೇಂದ್ರ ಅವರ ಹೆಸರು ಉಲ್ಲೇಖ ಮಾಡಿರಲಿಲ್ಲ. ಬಳಿಕ ಇಡಿ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಹಣ ವರ್ಗಾವಣೆಯಲ್ಲಿ ನಾಗೇಂದ್ರ ಅವರದ್ದೇ ಬಹುಪಾಲು ಪಾತ್ರವಿದೆಯೆಂದು ತೋರಿಸಲಾಗಿತ್ತು. ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!