Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸದನದಲ್ಲಿ ಇಂದು ವಾಲ್ಮೀಕಿ ಹಗರಣದ ಸದ್ದು : ಸಿಎಂ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ನಾಯಕರು..!

---Advertisement---

 

ಬೆಂಗಳೂರು : ವಿಧಾನಸಭೆಯ ಅಧಿವೇಶನದಲ್ಲಿ ಇಂದು ಕೂಡ ಬಿಜೆಪಿ ನಾಯಕರು ವಾಲ್ಮೀಕಿ ಹಗರಣದ ಬಗ್ಗೆ ಸದ್ದು ಗದ್ದಲ ಎಬ್ಬಿಸಿದ್ದಾರೆ. ಅಧಿವೇಶನದ ಆರಂಭದಿಂದಾನೂ ಕಾಂಗ್ರೆಸ್ ಮಣಿಸಲು ವಿಪಕಗಷ ನಾಯಕರು ಹಗರಣಗಳ ಬಗ್ಗೆ ಸಿದ್ಧತೆ ನಡೆಸಿಕೊಂಡು ಬಂದಿವೆ. ಇಂದು ಕೂಡ ಪ್ರತಿಭಟನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಮರ್ಪಕವಾದ ಉತ್ತರ ಕೊಟ್ಟಿಲ್ಲ. ಹೀಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಆದರೆ ಅಶೋಕ್ ಅವರ ಮಾತಿಗೆ ಆಡಳಿತ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದರು.

ಇನ್ನು ಈ ವಿಚಾರವಾಗಿ ಈಗಾಗಲೇ ಸಾಕಷ್ಟು ಬಾರಿ ಉತ್ತರ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಇಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯವರಿಗೆ ನನ್ನ ಹೆಸರಿಗೆ ಮಸಿ ಬಳಿಯಬೇಕು ಎಂಬ ಉದ್ದೇಶ ಇಟ್ಟುಕೊಂಡಿದ್ದಾರೆ. ಬಿಜೆಪಿ ಮಾಡಿದ ಆರೋಪಗಳು ಸತ್ಯಕ್ಕೆ ದೂರವಾದುದ್ದಾಗಿದೆ. ಅಕ್ರಮ ನಡೆದೇ ಇಲ್ಲ ಅಂತ ನಾನು ಹೇಳಲ್ಲ. ಆದರೆ ಅಕ್ರಮಕ್ಕೂ ಸರ್ಕಾರಕ್ಕೂ, ಹಣಕಾಸು ಇಲಾಖೆಗೂ ಸಂಬಂಧವಿಲ್ಲ. ಅಷ್ಟಕ್ಕೂ ನಾನ್ಯಾಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಬಿಜೆಪಿಯವರು ಸುಳ್ಳನ್ನೇ ನೂರು ಬಾರಿ ಹೇಳುವ ನಿಸ್ಸೀಮರು ಎಂದಿದ್ದಾರೆ.

ಸಿಎಂ ಉತ್ತರಕ್ಕೆ ಸಮಾಧಾನಗೊಳ್ಳದ ಬಿಜೆಪಿ ನಾಯಕರು ಆರಂಭದಲ್ಲಿಯೇ ವಿರೋಧ ವ್ಯಕ್ತಪಡಿಸಿದ್ದಾರೆ. ನೀವೂ ಭ್ರಷ್ಟಾಚಾರದಲ್ಲಿ‌ ನಿಸ್ಸೀಮರು ಎಂದು ಬಿಜೆಪಿಯ ರವಿಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ಅತ್ತ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...