ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು : ಚಿಕ್ಕಜಾಜೂರಿನಲ್ಲಿ ನಿಲುಗಡೆ ಬಗ್ಗೆ ಮಾಹಿತಿ

ಚಿತ್ರದುರ್ಗ,(ಜೂನ್.30) : ಇದೇ ಜೂನ್ 27 ರಿಂದ ಧಾರವಾಡ ಹಾಗೂ ಬೆಂಗಳೂರಿನ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕಾರ್ಯಾರಂಭ ಶುರು ಮಾಡಿದ್ದು, ಮಂಗಳವಾರ ಹೊರತುಪಡಿಸಿ ಪ್ರತಿ ದಿನವೂ ಸಂಚರಿಸಲಿದೆ. ಇದು ಕರ್ನಾಟಕದಲ್ಲಿ  ಸಂಚಾರ ಆರಂಭಿಸಿರುವ ಎರಡನೇಯ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಇದಾಗಿದೆ.

ಮೊದಲ ದಿನ ಮಾರ್ಗದ ಎಲ್ಲ ಪ್ರಮುಖ ನಿಲ್ದಾಣಗಳಲ್ಲಿ ಮಾತ್ರ ಸಚಿವಾಲಯದ ಆದೇಶದಂತೆ ನಿಲುಗಡೆ ನೀಡಲಾಗಿತ್ತು. ಅದರಂತೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರಿನಲ್ಲಿ ಮೊದಲ ದಿನ ಅದ್ದೂರಿ ಸ್ವಾಗತ ಕೋರಲಾಗಿತ್ತು. ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿಯವರ ಮನವಿಯ ಮೇರೆಗೆ ಚಿಕ್ಕಜಾಜೂರಿನಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿತ್ತು.

ಆದರೆ ಈ ಭಾಗದ ಜನರಲ್ಲಿ ಪ್ರತಿ ದಿನವೂ ಇಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಿದ್ದಾರೆಂದು ಗೊಂದಲಕ್ಕೀಡಾಗಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು.

ಆದರೆ ಧಾರವಾಡ ಹಾಗೂ ಬೆಂಗಳೂರಿನ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹುಬ್ಬಳ್ಳಿ, ದಾವಣಗೆರೆ ಮತ್ತು ಯಶವಂತಪುರದಲ್ಲಿ ಮಾತ್ರ ನಿಲುಗಡೆ ಇರುತ್ತದೆ. ಮತ್ತೆ ಯಾವುದಾದರೂ ನಿಲ್ದಾಣದಲ್ಲಿ ನಿಲುಗಡೆ ಬೇಡಿಕೆ ಇದ್ದರೆ, ಅದನ್ನು ಪರಿಶೀಲಿಸಿ ದೆಹಲಿಯ ಸಚಿವರ ಕಚೇರಿಗೆ ಮುಂದಿನ ಆದೇಶಕ್ಕಾಗಿ ಕಳುಹಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

41 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago