Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

4ನೇ ಬಾರಿಗೆ ಭರ್ತಿಯಾಗುವತ್ತ ವಾಣಿ ವಿಲಾಸ ಸಾಗರ..!

---Advertisement---

ಚಿತ್ರದುರ್ಗ: ಜಲಾಶಯಗಳು ರೈತರ ಜೀವನಾಡಿಯಾಗಿರುತ್ತವೆ. ಜಲಾಶಯಗಳು ತುಂಬಿದರೆ ಕೃಷಿಗೆ, ಜಾನುವಾರುಗಳಿಗೆ ತೊಂದರೆಯಿರಲ್ಲ. ನೆಮ್ಮದಿಯಾಗಿರುತ್ತವೆ, ಬೆಳೆಯೂ ಕೈಗತ್ತುತ್ತದೆ. ಚಿತ್ರದುರ್ಗದ ಜನ ಕಳೆದ ವರ್ಷವೂ ಖುಷಿಯಾಗಿದ್ರು, ಈ ವರ್ಷವೂ ಅದೇ ಸಂತಸ ಮುಂದುವರೆಯುವ ಎಲ್ಲಾ ಲಕ್ಷಣಗಳು ಕಾಣಿಸ್ತಾ ಇದಾವೆ. ಅದಕ್ಕೆ ಕಾರಣ ವಾಣಿ ವಿಲಾಸ ಜಲಾಶಯ. ಹೌದು ಕಳೆದ ಬಾರಿ ಕೋಡಿ ಬಿದ್ದಿದ್ದ ಜಲಾಶಯ, ಈ ಬಾರಿಯೂ ತುಂಬುವ ಲಕ್ಷಣಗಳು ಕಾಣಿಸುತ್ತಿವೆ.

ಹಾಗೇನಾದ್ರೂ ಆದ್ರೆ 4ನೇ ಬಾರಿ ತುಂಬಿದ ಇತಿಹಾಸ ನಿರ್ಮಿಸಲಿದೆ. ರಾಜ್ಯದಲ್ಲಿ ಆರಂಭದಿಂದಾನೇ ಮಳೆಯ ಪ್ರಮಾಣ ಜೋರಾಗಿದೆ. ಅಷ್ಟೇ ಅಲ್ಲದೆ ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ನಾಲೆಯತ್ತ ನೀರು ಹರಿಯಲಿದೆ. ಜುಲೈ 27ರಿಂದ ನಾಲ್ಕು ತಿಂಗಳವರೆಗೆ ನೀರು ಬರುವ ಕಾರಣ ವರ್ಷದಲ್ಲಿಯೇ ಎರಡನೇ ಬಾರಿಗೆ ಜಲಾಶಯ ತುಂಬುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಜುಲೈ 27ರಿಂದ ನಾಲ್ಕು ತಿಂಗಳು ಕಾಲುವೆಗುಂಟ ನೀರು ಹರಿದರೆ ತರೀಕೆರೆ, ಕಡೂರು, ಹೊಸದುರ್ಗ ಭಾಗದ ಕೆರೆಗಳು ತುಂಬಿ, ವಾರದೊಳಗೆ ಜಲಾಶಯಕ್ಕೆ ನೀರು ಬರುತ್ತದೆ.

ನಿತ್ಯವು ಕನಿಷ್ಠ 600 ಜ್ಯುಸೆಕ್ ನೀರು ಜಲಾಶಯದತ್ತ ಬರಲಿದೆ. ಜೊತೆಗೆ ಹಾಸನ, ಚಿಕ್ಕಮಗಳೂರು ಭಾಗದಲ್ಲಿ ಉತ್ತಮ ಮಳೆಯೂ ಬರುತ್ತಿರುವುದರಿಂದ ವೇದಾವತಿ ನದಿ ತುಂಬಿ ಹರಿದು, ಜಲಾಶಯದ ಒಳಹರಿವು ಹೆಚ್ಚಾಗಲಿದೆ‌. ಇದರಿಂದಾಗಿ ನವೆಂಬರ್ ವೇಳೆಗೆ ಜಲಾಶಯ ಭರ್ತಿಯಾಗುವ ನಿರೀಕ್ಷೆ ಇದೆ. ಪ್ರಸ್ತುತ ಜಲಾಶಯದಲ್ಲಿ 123.80 ಅಡಿ ನೀರೊದೆ. ಹೊರಗಿನಿಂದಾನೂ ನೀರು ಬಂದು, ಮಳೆಯೂ ಬರ್ತಾ ಇರೋ ಕಾರಣ ಕಳೆದ ವರ್ಷಕ್ಕಿಂತ ಬಹಳ ಬೇಗನೇ ಜಲಾಶಯ ತುಂಬುವ ಎಲ್ಲಾ ಲಕ್ಷಣಗಳು ಕಾಣಿಸ್ತಾ ಇದಾವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ | ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ; ಕೋರ್ಟ್​ ಆದೇಶ

ಚಿತ್ರದುರ್ಗ : ಬರ, ಭದ್ರಾ ಮೇಲ್ದಂಡೆ, ಗ್ಯಾರಂಟಿ ರಿಪೋರ್ಟ್ ರೆಡಿ ಇಟ್ಟುಕೊಳ್ಳಿ: ಸಿಎಂ ಸಭೆಗೂ ಮುನ್ನ ಅಧಿಕಾರಿಗಳಿಗೆ ಡಿಸಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ : ಬೀದಿಗಿಳಿದು ಸೂಕ್ತ ಉತ್ತರ ನೀಡಲಿದ್ದೇವೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಎಂ.ಎಲ್.ಸಿ.ನವೀನ್ ಮುನ್ನೆಚ್ಚರಿಕೆ

ಶಾಸಕ ​ಟಿ. ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ‘ಯುವ ಸೇನೆ’ ಪಟ್ಟು: ಬರಗೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ!

ಚಿತ್ರದುರ್ಗದಲ್ಲಿ ‘ದುರ್ಗೋತ್ಸವ’ ಆಚರಣೆಗೆ ಅಗ್ರಹ: ಸರ್ಕಾರದ ಗಮನಸೆಳೆಯಲು ಗಣೇಶ್ ಏಕಾಂಗಿ ಪ್ರತಿಭಟನೆ!

ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತರ ಆಗ್ರಹ: ರೈತ ಸಂಘ-ಹಸಿರುಸೇನೆಯಿಂದ ಪ್ರತಿಭಟನೆ

Leave a Comment